ನೈಸ್ ಪತ್ರ ಪ್ರಕರಣ, ಮೆತ್ತಗಾದ ದೇವೇಗೌಡ
ಗುಲ್ಬರ್ಗಾ, ಫೆ.5 : 'ನ್ಯಾಯಾಂಗ ವ್ಯವಸ್ಥೆ ಮೇಲೆ ಅಪಾರ ಗೌರವ ಹಾಗೂ ನಂಬಿಕೆ ಇದೆ. ನೈಸ್ ವ್ಯವಹಾರದಲ್ಲಿ ನಡೆದಿರುವ ಅಕ್ರಮಗಳನ್ನು ನ್ಯಾಯಾಲಯದ ಗಮನಕ್ಕೆ ತರುವ ಏಕೈಕ ಉದ್ದೇಶದಿಂದ ನ್ಯಾಯಮೂರ್ತಿಗಳಿಗೆ ಪತ್ರ ಬರೆಯಲಾಗಿತ್ತು' ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಭಾವ ಬೀರಲು ಇಲ್ಲವೆ, ಒತ್ತಡ ಹೇರಲು ಪತ್ರ ಬರೆಯಲಾಗಿಲ್ಲ ಎಂದರು. ನೈಸ್ ಅವ್ಯವಹಾರವನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡಬೇಕು ಎನ್ನುವ ದೇವೇಗೌಡರ ಮಹತ್ವಾಕಾಂಕ್ಷೆ ಈಡೇರಿದೆ ಎನ್ನಬಹುದು. ದೇವೇಗೌಡರ ಪತ್ರವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಿರುವ ನ್ಯಾಯಾಲಯ, ನೈಸ್ ಹಗರಣವನ್ನು ಲೋಕಾಯುಕ್ತ ಇಲಾಖೆಗೆ ವಹಿಸಿದೆ. ಅಷ್ಟರ ಮಟ್ಟಿಗೆ ದೇವೇಗೌಡರ ಲಾಭ ಆಗಿದೆ ಎಂದು ಹೇಳಲಾಗುತ್ತಿದೆ.
ಆದರೆ, ದೇವೇಗೌಡರ ಪತ್ರಕ್ಕೆ ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ತೀವ್ರ ಆಕ್ಷೇಪ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದವು. ನ್ಯಾಯಾಂಗ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಮೂಗು ತೋರಿಸಬಾರದು ಎಂದು ತಾಕೀತು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಏನಾದರೂ ಹೇಳಿಕೆಗಳಿದ್ದರೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಗುಲ್ಬರ್ಗಾದಲ್ಲಿ ನೀಡಿರುವ ಹೇಳಿಕೆ ಭಾರಿ ಮಹತ್ವದ್ದಾಗಿದೆ.
(ದಟ್ಸ್ ಕನ್ನಡ ವಾರ್ತೆ)
ನೈಸ್ ತನಿಖೆ ಲೋಕಾಯುಕ್ತಕ್ಕೆ: ಹೈಕೋರ್ಟ್
ನೈಸ್ ವಿರುದ್ಧ ಅನಂತಮೂರ್ತಿ ಸುಪ್ರಿಂಕೋರ್ಟ್ಗೆ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications