ಮುಮ್ತಾಜಳ ರಕ್ಷಣೆಗೆ ಸಾವಿರಾರು ತುಳಸಿಯರು

ಅತಿಯಾದ ಕೈಗಾರಿಕೆಗಳ ಸ್ಥಾಪನೆ ಹಾಗೂ ವಾಹನಗಳು ಉಗುಳುವ ಹೊಗೆಯಿಂದಾಗಿ ಐತಿಹಾಸಿಕ ತಾಜ್ ಮಹಲ್ ಪರಿಸರದ ಸಮಸ್ಯೆ ಎದುರಿಸುತ್ತಿದೆ. ಇದರಿಂದಾಗಿ ಶುಭ್ರವಾಗಿರುವ ತಾಜ್ ಮಹಲ್ ದಿನದಿಂದ ದಿನಕ್ಕೆ ಹಳದಿ ಬಣ್ಣಕ್ಕೆ ತಿರುಗುತ್ತಿದೆ. ಈ ಐತಿಹಾಸಿಕ ಸ್ಮಾರಕಕ್ಕೆ ಆಗುತ್ತಿರುವ ಧಕ್ಕೆ ತಪ್ಪಿಸಲು ಉತ್ತರ ಪ್ರದೇಶ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆಯಾದರೂ ಗಿಟ್ಟುತ್ತಿಲ್ಲ. ತಾಜ್ ಮಹಲ್ ರಕ್ಷಣೆಗೆ ಪಣತೊಟ್ಟಿರುವ ಸರ್ಕಾರ ಇದೀಗ ಇನ್ನೊಂದು ವಿನೂತನ ಪ್ರಯತ್ನಕ್ಕೆ ಕೈಹಾಕಿದೆ. ತಾಜ್ ಮಹಲ್ ಸುತ್ತಲೂ ತುಳಿಸಿ ಗಿಡಗಳನ್ನು ನೆಟ್ಟರೆ ಹೇಗೆ?
ತುಳಸಿ ಗಿಡ ಔಷಧೀಯ ಸಸ್ಯ ಎನ್ನುವುದು ಗೊತ್ತಿರುವ ಸಂಗತಿ. ಇದರಿಂದ ಅತ್ಯಧಿಕ ಪ್ರಮಾಣದಲ್ಲಿ ಹೊರಸೂಸುವ ಅಮ್ಲಜನಕ ಮಾರ್ಬಲ್ ನಿಂದ ನಿರ್ಮಾಣವಾಗಿರುವ ತಾಜ್ ಮಹಲ್ ಗೆ ಆಗುತ್ತಿರುವ ಧಕ್ಕೆ ತಡೆಹಿಡಿಯಲಿದೆ. ಹಾಗೂ ಕೈಗಾರಿಕೆಗಳು ಹಾಗೂ ವಾಹನಗಳಿಂದ ಹೊರಬರುವ ಪರಿಸರ ಮಾಲಿನ್ಯ ತಡೆಗಟ್ಟಲು ಸಾದ್ಯ. ಆದ್ದರಿಂದ ತಾಜ್ ಮಹಲ್ ಸುತ್ತಲೂ ಸಾವಿರಾರು ತುಳಸಿ ಗಿಡಗಳನ್ನು ನೆಡಲು ಉತ್ತರ ಪ್ರದೇಶ ಸಿದ್ದತೆ ನಡೆಸಿದೆ ಎಂದು ಉತ್ತರ ಪ್ರದೇಶದ ವಲಯ ಅರಣ್ಯಾಧಿಕಾರಿ ಆರ್ ಪಿ ಬಾರ್ತಿ ತಿಳಿಸಿದ್ದಾರೆ.
ಆಗ್ರಾದಲ್ಲಿರುವ ಈ ಐತಿಹಾಸಿಕ ಸ್ಮಾರಕಕ್ಕೆ ರಕ್ಷಣೆಗಾಗಿ ಉತ್ತರ ಪ್ರದೇಶ ಸರ್ಕಾರ ತಾಜ್ ಮಹಲ್ ಸಮೀಪ ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರವನ್ನು ಸ್ಥಾಪಿಸಿದೆ. ಅದರೆ, ಅದರಿಂದ ತಾಜ್ ಮಹಲ್ ಮೇಲೆ ಆಗುತ್ತಿರುವ ಧಕ್ಕೆಯನ್ನು ತಡೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತುಳಸಿ ಗಿಡಗಳನ್ನು ನೆಡುವ ಮೂಲಕ ಪರಿಸರ ಶುದ್ಧಿಯಾಗಿರಿಸಲು ಸರ್ಕಾರ ಕೈಹಾಕಿದೆ. ಹಿಂದೂಗಳ ಮನೆಯಲ್ಲಿ ತುಳಸಿ ಗಿಡಗಳನ್ನು ತಪ್ಪದೆ ಇಡುವುದಕ್ಕೆ ಆ ಸಸ್ಯದ ಗುಣಮುಖಿ ಗುಣಗಳೇ ಕಾರಣವಿರಬಹುದಲ್ಲವೆ?
(ದಟ್ಸ್ ಕನ್ನಡ ವಾರ್ತೆ)
ಅಂದಹಾಗೆ, ತಾಜ್ ಮಹಲ್ ಕಟ್ಟಡ ವೈದಿಕ ಸಂಪ್ರದಾಯಕ್ಕೆ ಸೇರಿದ್ದ ಒಂದು ದೇವಾಲಯವಾಗಿತ್ತೇ?
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications