ಲೋಕಸಭೆಗೆ ಭವಾನಿ ರೇವಣ್ಣ ಸ್ಪರ್ಧೆ ಇಲ್ಲ
ರಾಯಚೂರು, ಫೆ. 6: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಕೆ ಆರ್ ನಗರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭವಾನಿ ರೇವಣ್ಣ ಅವರು ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದು.
ಮುಂದಿನ ಲೋಕಸಭೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವೇಗೌಡರು, ಭವಾನಿ ರೇವಣ್ಣ ಲೋಕಸಭೆ ಚುನಾವಣಿಯಲ್ಲಿ ಸ್ಪರ್ಧಿಸುವ ಕುರಿತು ಯಾವ ಚಿಂತನೆಯನ್ನು ಮಾಡಿಲ್ಲ. ಕೇಂದ್ರದಲ್ಲಿರುವ ಯುಪಿಎ ಹಾಗೂ ಎನ್ ಡಿಎ ಪಕ್ಷಗಳು ಉತ್ತಮ ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಈ ವೈಫಲ್ಯವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಚುನಾವಣೆಯ ಪೂರ್ವ ಭಾವಿ ತಯಾರಿಗೆ ಫೆ.14 ರಂದು ತೃತೀಯ ರಂಗದ ಸಭೆಯನ್ನು ನವದೆಹಲಿಯಲ್ಲಿ ಏರ್ಪಡಿಸಿರುವುದಾಗಿ ದೇವೇಗೌಡರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಗೌಡರ ಸೊಸೆ ಭವಾನಿ ರೇವಣ್ಣ ರಾಜಕೀಯಕ್ಕೆ?












Click it and Unblock the Notifications