ಕಾನೂನು ಕೈಗೆತ್ತಿಕೊಂಡರೆ ಕ್ರಮ: ಆಚಾರ್ಯ
ಬೆಂಗಳೂರು, ಫೆ.6: ಯಾವುದೇ ಸಂದರ್ಭಗಳಲ್ಲಿ ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಲ್ಲಿ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವರಾದ ವಿ.ಎಸ್. ಆಚಾರ್ಯ ಅವರು ತಿಳಿಸಿದರು.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವರು ಮಲೆನಾಡು ಭಾಗಗಳಲ್ಲಿ ನಕ್ಸಲ್ ಚಟುವಟಿಕೆಗಳು ಕಡಿಮೆಯಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಬೆಂಗಳೂರಿನಲ್ಲಿ ಅಪರಾಧ ಸಂಖ್ಯೆಗಳು ಕಡಿಮೆಯಾಗಿವೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು ಮಂಗಳೂರಿನ ಪಬ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications