ಮುಂದಿನ ಪ್ರಧಾನಿ ಮಹಿಳೆ, ಕೋಡಿಹಳ್ಳಿ ಸ್ವಾಮೀಜಿ
ಧಾರವಾಡ, ಫೆ. 6 : ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗುವುದು ಅನುಮಾನವಾಗಿದೆ. ಇಂತಹ ಸಂದರ್ಭದಲ್ಲಿ ಕೋಡಿಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಅವರ ಭವಿಷ್ಯ ನಿಜವಾಗಿದ್ದೇ ಆದರೆ ಮುಂಬರುವ ಲೋಕಸಭೆ ಚುನಾವಣೆ ಬಳಿಕ ಮಹಿಳೆಯೊಬ್ಬರು ಪ್ರಧಾನಮಂತ್ರಿ ಪಟ್ಟವನ್ನು ಅಲಂಕರಿಸುವ ಸಾಧ್ಯತೆಗಳಿವೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ಆಗಮಿಸಿದ್ದ ಅವರು, ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಸಾಕಷ್ಟು ಉತ್ತಮ ಸಾಧನೆ ಮಾಡಲಿದ್ದು, ಮಹಿಳೆಯೊಬ್ಬರು ಪ್ರಧಾನಮಂತ್ರಿಯಾಗುವ ಸಾಧ್ಯತೆಗಳೇ ಹೆಚ್ಚು. ಆದರೆ ಅವರ ಅಧಿಕಾರದ ಅವಧಿ ಕಡಿಮೆ ಎಂದು ಹೇಳಿದ್ದಾರೆ.
ಪ್ರಮುಖ ಪಕ್ಷವೊಂದು ಅತ್ಯಧಿಕ ಸ್ಥಾನ ಗಳಿಸಿ ಪ್ರಧಾನಿ ಪಟ್ಟಕ್ಕೆ ಸಮೀಪ ಇರುತ್ತದಾದರೂ ಆ ಸಂದರ್ಭದಲ್ಲಿ ಪ್ರಧಾನಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಆಗುವ ಗಲಾಟೆಯಲ್ಲಿ ಒಂದು ಬಣ ಪಕ್ಷದಿಂದ ಸಿಡಿದು ಹೋಗಲಿದೆ ಎಂದರು. ಮುಂಬೈ ಭಯೋತ್ಪಾದನೆ ಕುರಿತು ತಾವು ಹಿಂದೆಯೇ ಭವಿಷ್ಯ ನುಡಿದಿದ್ದಾಗಿ ತಿಳಿಸಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ತಮ್ಮನ್ನು ಭೇಟಿ ಮಾಡಿದಾಗ ಶೀಘ್ರದಲ್ಲೇ ಅಧಿಕಾರ ಕಳೆದುಕೊಳ್ಳಲಿದ್ದೀರಿ ಎಂದವರಿಗೆ ತಿಳಿಸಿದ್ದಾಗಿ ಹೇಳಿದರು.
ತೃತೀಯ ರಂಗದ ಪಕ್ಷಗಳಲ್ಲಿ ಮುಖ್ಯವಾಗಿ ಮಹಿಳಾ ನಾಯಕರೆಂದರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ, ಎಡಪಕ್ಷಗಳ ನಾಯಕಿ ಬೃಂದಾ ಕಾರಟ್ ಆಗಿದ್ದಾರೆ. ಮಾಯಾವತಿ ಅವರನ್ನು ಪ್ರಧಾನಮಂತ್ರಿ ಹುದ್ದೆ ಅಭ್ಯರ್ಥಿ ಎಂದು ಸೂಚಿಸಲು ಎಡಪಕ್ಷಗಳು ಈ ಹಿಂದೆ ಹಿಂದೇಟು ಹಾಕಿದ್ದನ್ನು ಸ್ಮರಿಸಬಹುದು.
(ದಟ್ಸ್ ಕನ್ನಡ ವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications