ಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ

ಎಲ್ಲ 9 ಬಂಧಿತರು ಕೇರಳದ ಮೂಲದ ಉಗ್ರ ಸಂಘಟನೆಗೆ ಸೇರಿದವರು. ವಿಚಾರಣೆಯಲ್ಲಿ ಭಯೋತ್ಪಾದನೆ ಹಬ್ಬಿಸಲೆಂದೇ ಸರಣಿ ಬಾಂಬ್ ಸ್ಫೋಟ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರ ಬಂಧನದಿಂದಾಗಿ ಭಾರೀ ಕಗ್ಗಂಟಾಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣವನ್ನು ಭೇದಿಸಿದಂತಾಗಿದೆ.
ಬಂಧಿತರು : ಅಬ್ದುಲ್ ಸತ್ತಾರ್, ಮುಜೀಬ್, ಬದ್ರುದ್ದಿನ್, ಫಕ್ರಿಯಾ, ಅಬ್ದುಲ್ ಜಬ್ಬಾರ್, ಮುನಾಫ್, ಸಫ್ರುದ್ದಿನ್, ಅಬ್ದುಲ್ ಜಲೀಲ್ ಮತ್ತು ಫೈಜಲ್. ಹೈದರಾಬಾದಿನಲ್ಲಿ ಬಂಧಿತನಾದ ಸತ್ತಾರ್ ನೀಡಿದ ಸುಳಿವಿನ ಮೇರೆಗೆ ಉಳಿದವರನ್ನು ಕೇರಳದಲ್ಲಿ ಬಂಧಿಸಲಾಗಿದೆ. ತಂಡದಲ್ಲಿ ಇನ್ನೂ ಕೆಲವರು ಉಳಿದಿದ್ದು, ಅವರಿಗಾಗಿ ಹುಡುಕಾಟ ಸಾಗಿದೆ.
ಕಳೆದ ವರ್ಷದ ಜುಲೈ 25ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಸಣ್ಣ ಪ್ರಮಾಣದ 9 ಸರಣಿ ಸ್ಫೋಟಗಳು ಸಂಭವಿಸಿದ್ದವು. ಇದರಲ್ಲಿ ಓರ್ವ ಮಹಿಳೆ ಸತ್ತು ಒಂಬತ್ತು ಜನ ಗಾಯಗೊಂಡಿದ್ದರು. ಈ ಸರಣಿ ಸ್ಫೋಟಗಳ ಹೊಣೆಯನ್ನು ಯಾವ ಸಂಘಟನೆಗಳೂ ಹೊತ್ತುಕೊಂಡಿದ್ದಿಲ್ಲ.
ಪೊಲೀಸ್ ಮಹಾನಿರ್ದೇಶಕ ಅಜಯ್ ಸಿಂಗ್, ಬೆಂಗಳೂರು ಪೊಲೀಸ್ ಆಯುಕ್ತ ಶಂಕರ್ ಬಿದರಿ ಮತ್ತು ರಾಜ್ಯ ಪೊಲೀಸರ ನೇತೃತ್ವ ವಹಿಸಿದ್ದ ಗೋಪಾಲ್ ಹೊಸೂರ್ ಅವರು ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಗಳ ಮತ್ತು ಅವರ ಸಂಚಿನ ಬಗ್ಗೆ ವಿವರ ನೀಡಿದರು.
ಸ್ಫೋಟಗಳ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತಿದ್ದಿಲ್ಲ, ಸ್ಫೋಟಗೊಂಡ ಸ್ಥಳಗಳಲ್ಲಿ ಬೆರಳಿನ ಗುರುತುಗಳು ಸಿಕ್ಕಿದ್ದಿಲ್ಲ, ಅವರು ಯಾವ ಸುಳಿವೂ ನೀಡಿದ್ದಿಲ್ಲ. ಇದರಿಂದಾಗಿ ಅವರನ್ನು ಹುಡುಕುವುದು ಭಾರೀ ಸವಾಲಿನದಾಗಿತ್ತು. ಆದರೂ, ಪಟ್ಟು ಬಿಡದ ರಾಜ್ಯದ ಪೊಲೀಸರು ಆಂಧ್ರ, ಕೇರಳ, ಗುಜರಾತ್ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶಂಕರ್ ಬಿದರಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಬೆಂಗಳೂರಿಗರಿಗೆ ಇಂದು ಕರಾಳ ಶುಕ್ರವಾರ
ಬೆಂಗಳೂರು ಸರಣಿ ಸ್ಫೋಟ ಎಲ್ಲಿ, ಯಾವಾಗ?
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications