ಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ

ಎಲ್ಲ 9 ಬಂಧಿತರು ಕೇರಳದ ಮೂಲದ ಉಗ್ರ ಸಂಘಟನೆಗೆ ಸೇರಿದವರು. ವಿಚಾರಣೆಯಲ್ಲಿ ಭಯೋತ್ಪಾದನೆ ಹಬ್ಬಿಸಲೆಂದೇ ಸರಣಿ ಬಾಂಬ್ ಸ್ಫೋಟ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರ ಬಂಧನದಿಂದಾಗಿ ಭಾರೀ ಕಗ್ಗಂಟಾಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣವನ್ನು ಭೇದಿಸಿದಂತಾಗಿದೆ.
ಬಂಧಿತರು : ಅಬ್ದುಲ್ ಸತ್ತಾರ್, ಮುಜೀಬ್, ಬದ್ರುದ್ದಿನ್, ಫಕ್ರಿಯಾ, ಅಬ್ದುಲ್ ಜಬ್ಬಾರ್, ಮುನಾಫ್, ಸಫ್ರುದ್ದಿನ್, ಅಬ್ದುಲ್ ಜಲೀಲ್ ಮತ್ತು ಫೈಜಲ್. ಹೈದರಾಬಾದಿನಲ್ಲಿ ಬಂಧಿತನಾದ ಸತ್ತಾರ್ ನೀಡಿದ ಸುಳಿವಿನ ಮೇರೆಗೆ ಉಳಿದವರನ್ನು ಕೇರಳದಲ್ಲಿ ಬಂಧಿಸಲಾಗಿದೆ. ತಂಡದಲ್ಲಿ ಇನ್ನೂ ಕೆಲವರು ಉಳಿದಿದ್ದು, ಅವರಿಗಾಗಿ ಹುಡುಕಾಟ ಸಾಗಿದೆ.
ಕಳೆದ ವರ್ಷದ ಜುಲೈ 25ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಸಣ್ಣ ಪ್ರಮಾಣದ 9 ಸರಣಿ ಸ್ಫೋಟಗಳು ಸಂಭವಿಸಿದ್ದವು. ಇದರಲ್ಲಿ ಓರ್ವ ಮಹಿಳೆ ಸತ್ತು ಒಂಬತ್ತು ಜನ ಗಾಯಗೊಂಡಿದ್ದರು. ಈ ಸರಣಿ ಸ್ಫೋಟಗಳ ಹೊಣೆಯನ್ನು ಯಾವ ಸಂಘಟನೆಗಳೂ ಹೊತ್ತುಕೊಂಡಿದ್ದಿಲ್ಲ.
ಪೊಲೀಸ್ ಮಹಾನಿರ್ದೇಶಕ ಅಜಯ್ ಸಿಂಗ್, ಬೆಂಗಳೂರು ಪೊಲೀಸ್ ಆಯುಕ್ತ ಶಂಕರ್ ಬಿದರಿ ಮತ್ತು ರಾಜ್ಯ ಪೊಲೀಸರ ನೇತೃತ್ವ ವಹಿಸಿದ್ದ ಗೋಪಾಲ್ ಹೊಸೂರ್ ಅವರು ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಗಳ ಮತ್ತು ಅವರ ಸಂಚಿನ ಬಗ್ಗೆ ವಿವರ ನೀಡಿದರು.
ಸ್ಫೋಟಗಳ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತಿದ್ದಿಲ್ಲ, ಸ್ಫೋಟಗೊಂಡ ಸ್ಥಳಗಳಲ್ಲಿ ಬೆರಳಿನ ಗುರುತುಗಳು ಸಿಕ್ಕಿದ್ದಿಲ್ಲ, ಅವರು ಯಾವ ಸುಳಿವೂ ನೀಡಿದ್ದಿಲ್ಲ. ಇದರಿಂದಾಗಿ ಅವರನ್ನು ಹುಡುಕುವುದು ಭಾರೀ ಸವಾಲಿನದಾಗಿತ್ತು. ಆದರೂ, ಪಟ್ಟು ಬಿಡದ ರಾಜ್ಯದ ಪೊಲೀಸರು ಆಂಧ್ರ, ಕೇರಳ, ಗುಜರಾತ್ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶಂಕರ್ ಬಿದರಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಬೆಂಗಳೂರಿಗರಿಗೆ ಇಂದು ಕರಾಳ ಶುಕ್ರವಾರ
ಬೆಂಗಳೂರು ಸರಣಿ ಸ್ಫೋಟ ಎಲ್ಲಿ, ಯಾವಾಗ?
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications