ಬೊಮ್ಮನಹಳ್ಳಿಯಲ್ಲಿ ಮಾದರಿ 'ಜನಸ್ಪಂದನ' ಕಾರ್ಯಕ್ರಮ

ಅರಕೆರೆ ಮೈಕೋಲೇಔಟ್ ಆಟದ ಮೈದಾನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆದ ಕಾರ್ಯಕ್ರಮಕ್ಕೆ ನೂರಾರು ಜನ ನಾಗರಿಕರು ಬಂದು ಜನಪ್ರತಿನಿಧಿ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮುಂದೆ ತಾವು ಎದುರಿಸುತ್ತಿರುವ ಸಮಸ್ಯೆಗಳ ಅಹವಾಲನ್ನು ತೆರೆದಿಟ್ಟರು. ಬಿಜೆಪಿಯಿಂದ ಆಯ್ಕೆಯಾಗಿರುವ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ ಆಗಮಿಸಿ ಮತನೀಡಿದ ಜನರ ಕುಂದುಕೊರತೆಗಳಿಗೆ ಕಿವಿಯಾದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಕಿವಿಯನ್ನೂ ಹಿಂಡಿದರು.
ಸಾಮಾನ್ಯಜನರ ಪರವಾಗಿ ಪ್ರಮುಖವಾಗಿ ಮಾತನಾಡಿದ ಕಿರುತೆರೆ ನಟ, ನಿರ್ದೇಶಕ ಸಿಹಿಕಹಿ ಚಂದ್ರು ಅವರು ಕ್ಷೇತ್ರದಲ್ಲಿ ತಾವು ಎದುರಿಸುತ್ತಿರುವ ಕಹಿ ಅನುಭವಗಳ ಬುತ್ತಿಯನ್ನು ಬಿಚ್ಚಿಟ್ಟರು. ಸಿನೆಮಾದಲ್ಲಿ ನಾವು ರಾಜಕಾರಣಿಗಳನ್ನು ಕೆಟ್ಟದಾಗಿ ಚಿತ್ರಿಸುತ್ತೇವೆ. ಆದರೆ ವಸ್ತುಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ. ಶಾಸಕರು ಜನರಿಗೆ ಸ್ಪಂದಿಸುತ್ತಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸಮಸ್ಯೆಗಳು ನಿವಾರಣೆಯಾಗುವುದೇ ಇಲ್ಲ. ದೂರು ನೀಡಿದರೂ ಇಲಾಖೆಯ ನೌಕರರು ಬರುವುದೇ ಇಲ್ಲ ಎಂದು ದೂರಿದರು. ಕ್ಷೇತ್ರದಲ್ಲಿ ಜನರು ಎದುರಿಸುತ್ತಿರುವ ಕುಡಿಯುವ ನೀರು, ನೈರ್ಮಲ್ಯ, ಟ್ರಾಫಿಕ್ ಸಮಸ್ಯೆಗಳ ವಿವರಗಳನ್ನು ಶಾಸಕರು ಮತ್ತು ಅಧಿಕಾರಿಗಳ ಮುಂದಿಟ್ಟರು.
ಜನರ ಕುಂದುಕೊರತೆಗಳಿಗೆ ಪ್ರತಿಸ್ಪಂದಿಸಿದ ಶಾಸಕ ಸತೀಶ್ ರೆಡ್ಡಿಯವರು, ಇನ್ನು ಮೇಲೆ ನಿಗದಿತ ವೇಳೆಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ವಾಗ್ದಾನ ನೀಡಿದರು. ಸರಿಯಾಗಿ ಕೆಲಸ ನಿರ್ವಹಿಸದ, ಜನರಿಗೆ ಸ್ಪಂದಿಸದ ಅಧಿಕಾರಿಗಳನ್ನು ಎತ್ತಂಗಡಿ ಮಾಡುವುದಾಗಿ ಮಾತು ನೀಡಿದರು. ಕಾರ್ಯ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡ ಕೆಲ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ತಾವೇ ಗಡುವು ವಿಧಿಸಿಕೊಂಡಿದ್ದು ಜನಸ್ಪಂದನದ ವಿಶೇಷ.
ಬೊಮ್ಮನಹಳ್ಳಿಯೊಂದರಲ್ಲಿಯೇ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ 157 ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 90 ಕೋಟಿಗೂ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ. ಆದರೂ ಅಭಿವೃದ್ಧಿ ಕಾರ್ಯಗಳು ಕುಂಟುತ್ತ ಸಾಗಿವೆ. ಮಳೆಗಾಲ ಬಂತೆಂದರೆ ಪ್ರತಿದಿನ ಪತ್ರಿಕೆಗಳ ಮುಖಪುಟಗಳಲ್ಲಿ ಈ ಕ್ಷೇತ್ರ ರಾರಾಜಿಸುತ್ತದೆ.
ಒಟ್ಟಿನಲ್ಲಿ, ನಾಗರಿಕ ಜಾಗೃತಿಗೆ ಇಂಬು ನೀಡುತ್ತ ಜನರ ಕುಂದುಕೊರತೆಗಳಿಗೆ ಕನ್ನಡಿ ಹಿಡಿಯುತ್ತಿರುವ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ 'ಜನಸ್ಪಂದನ' ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications