ಬೊಮ್ಮನಹಳ್ಳಿಯಲ್ಲಿ ಮಾದರಿ 'ಜನಸ್ಪಂದನ' ಕಾರ್ಯಕ್ರಮ

ಅರಕೆರೆ ಮೈಕೋಲೇಔಟ್ ಆಟದ ಮೈದಾನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆದ ಕಾರ್ಯಕ್ರಮಕ್ಕೆ ನೂರಾರು ಜನ ನಾಗರಿಕರು ಬಂದು ಜನಪ್ರತಿನಿಧಿ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮುಂದೆ ತಾವು ಎದುರಿಸುತ್ತಿರುವ ಸಮಸ್ಯೆಗಳ ಅಹವಾಲನ್ನು ತೆರೆದಿಟ್ಟರು. ಬಿಜೆಪಿಯಿಂದ ಆಯ್ಕೆಯಾಗಿರುವ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ ಆಗಮಿಸಿ ಮತನೀಡಿದ ಜನರ ಕುಂದುಕೊರತೆಗಳಿಗೆ ಕಿವಿಯಾದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಕಿವಿಯನ್ನೂ ಹಿಂಡಿದರು.
ಸಾಮಾನ್ಯಜನರ ಪರವಾಗಿ ಪ್ರಮುಖವಾಗಿ ಮಾತನಾಡಿದ ಕಿರುತೆರೆ ನಟ, ನಿರ್ದೇಶಕ ಸಿಹಿಕಹಿ ಚಂದ್ರು ಅವರು ಕ್ಷೇತ್ರದಲ್ಲಿ ತಾವು ಎದುರಿಸುತ್ತಿರುವ ಕಹಿ ಅನುಭವಗಳ ಬುತ್ತಿಯನ್ನು ಬಿಚ್ಚಿಟ್ಟರು. ಸಿನೆಮಾದಲ್ಲಿ ನಾವು ರಾಜಕಾರಣಿಗಳನ್ನು ಕೆಟ್ಟದಾಗಿ ಚಿತ್ರಿಸುತ್ತೇವೆ. ಆದರೆ ವಸ್ತುಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ. ಶಾಸಕರು ಜನರಿಗೆ ಸ್ಪಂದಿಸುತ್ತಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸಮಸ್ಯೆಗಳು ನಿವಾರಣೆಯಾಗುವುದೇ ಇಲ್ಲ. ದೂರು ನೀಡಿದರೂ ಇಲಾಖೆಯ ನೌಕರರು ಬರುವುದೇ ಇಲ್ಲ ಎಂದು ದೂರಿದರು. ಕ್ಷೇತ್ರದಲ್ಲಿ ಜನರು ಎದುರಿಸುತ್ತಿರುವ ಕುಡಿಯುವ ನೀರು, ನೈರ್ಮಲ್ಯ, ಟ್ರಾಫಿಕ್ ಸಮಸ್ಯೆಗಳ ವಿವರಗಳನ್ನು ಶಾಸಕರು ಮತ್ತು ಅಧಿಕಾರಿಗಳ ಮುಂದಿಟ್ಟರು.
ಜನರ ಕುಂದುಕೊರತೆಗಳಿಗೆ ಪ್ರತಿಸ್ಪಂದಿಸಿದ ಶಾಸಕ ಸತೀಶ್ ರೆಡ್ಡಿಯವರು, ಇನ್ನು ಮೇಲೆ ನಿಗದಿತ ವೇಳೆಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ವಾಗ್ದಾನ ನೀಡಿದರು. ಸರಿಯಾಗಿ ಕೆಲಸ ನಿರ್ವಹಿಸದ, ಜನರಿಗೆ ಸ್ಪಂದಿಸದ ಅಧಿಕಾರಿಗಳನ್ನು ಎತ್ತಂಗಡಿ ಮಾಡುವುದಾಗಿ ಮಾತು ನೀಡಿದರು. ಕಾರ್ಯ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡ ಕೆಲ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ತಾವೇ ಗಡುವು ವಿಧಿಸಿಕೊಂಡಿದ್ದು ಜನಸ್ಪಂದನದ ವಿಶೇಷ.
ಬೊಮ್ಮನಹಳ್ಳಿಯೊಂದರಲ್ಲಿಯೇ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ 157 ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 90 ಕೋಟಿಗೂ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ. ಆದರೂ ಅಭಿವೃದ್ಧಿ ಕಾರ್ಯಗಳು ಕುಂಟುತ್ತ ಸಾಗಿವೆ. ಮಳೆಗಾಲ ಬಂತೆಂದರೆ ಪ್ರತಿದಿನ ಪತ್ರಿಕೆಗಳ ಮುಖಪುಟಗಳಲ್ಲಿ ಈ ಕ್ಷೇತ್ರ ರಾರಾಜಿಸುತ್ತದೆ.
ಒಟ್ಟಿನಲ್ಲಿ, ನಾಗರಿಕ ಜಾಗೃತಿಗೆ ಇಂಬು ನೀಡುತ್ತ ಜನರ ಕುಂದುಕೊರತೆಗಳಿಗೆ ಕನ್ನಡಿ ಹಿಡಿಯುತ್ತಿರುವ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ 'ಜನಸ್ಪಂದನ' ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications