ಸಿಎಂ ವಾಹನಕ್ಕೂ ಕನ್ನಡ ನಾಮಫಲಕ ಕಡ್ಡಾಯ!
ಬೆಂಗಳೂರು, ಫೆ. 8:ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಾಹನ ಸೇರಿದಂತೆ ಎಲ್ಲಾ ನಾಗರೀಕರಿಗೂ ಮಾ. 1 ರ ಗಡುವು ನೀಡಲಾಗಿದೆ. ಅಷ್ಟರೊಳಗೆ ತಮ್ಮ ವಾಹನಗಳಿಗೆ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಗುಡುಗಿದ್ದಾರೆ.
2009 ಅನ್ನು ಕನ್ನಡ ಅನುಷ್ಠಾನ ವರ್ಷ ಎಂದು ಬರೀ ಘೋಷಿಸಿದರೆ ಸಾಲದು, ಅದನ್ನು ಮನಃ ಪೂರ್ವಕವಾಗಿ ಅನುಸರಿಸಬೇಕು.ಎಲ್ಲಾ ಶಾಸಕರ ವಾಹನಗಳಿಗೆ ಮಾ. 1 ರೊಳಗೆ ಕನ್ನಡ ನಾಮಫಲಕ ಅಳವಡಿಸಿಕೊಳ್ಳಲು ಹೇಳಲಾಗಿದೆ. ತಪ್ಪಿದಲ್ಲಿ ಅವರ ಮೇಲೆ ಒತ್ತಡ ಹೇರಲಾಗುವುದು ಎಂದು ಚಂದ್ರು ಸುದ್ದಿಗಾರರಿಗೆ ತಿಳಿಸಿದರು.
ಈಗಾಗಲೇ ಕನ್ನಡ ನಾಮಫಲಕ ಅಳವಡಿಕೆಯಲ್ಲಿ ವಿಳಂಬವಾಗಿದೆ. ಸರ್ಕಾರಿ ವಾಹನಗಳು ಈ ವಿಷಯದಲ್ಲಿ ಮಾದರಿಯಾಗಿರಬೇಕಿತ್ತು. ಆದರೆ, ಏಕೆ ತಡವಾಗುತ್ತಿದೆ ತಿಳಿಯುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಪತ್ರ ಬರೆದು ಎಚ್ಚರಿಸಲಾಗುವುದು. ಕನ್ನಡ ಅನುಷ್ಠಾನಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಆದರೆ, ಹಲವರು ಈ ಬಗ್ಗೆ ಉದಾಸೀನರಾಗಿದ್ದಾರೆ ಎಂದು ಚಂದ್ರು ಖೇದ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications