ರಾಮ ಮಂದಿರ ನಿರ್ಮಾಣ ಶತಸಿದ್ಧ: ಬಿಜೆಪಿ
ನಾಗಪುರ, ಫೆ.8 : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಬಂದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದಾಗಿ ಬಿಜೆಪಿ ಘೋಷಿಸಿದೆ. ರಾಮನ ಮೇಲೆ ನಂಬಿಕೆ ಇಟ್ಟಿರುವ ಯಾರಿಂದಲೂ ಅಲ್ಲಾಡಿಸಲಾಗದು. ವೈಭವಯುತ ಮಂದಿರ ನಿರ್ಮಾಣವಾಗಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ.
ಶನಿವಾರ ಆರಂಭವಾಗಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಮೈತ್ರಿ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ತ್ವರಿತ ನ್ಯಾಯಾಲಯ ಸ್ಥಾಪಿಸುವ ಯೋಜನೆ. ಅಗತ್ಯ ಬಿದ್ದರೆ ಕಾಯಿದೆ ರೂಪಿಸಲಾಗುವುದು ಎಂದರು.
ಯುಪಿಎ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ, ಆರ್ಥಿಕ ಸುಧಾರಣೆಗೆ 11 ಅಂಶದ ಯೋಜನೆ ಪ್ರಕಟಿಸಿದೆ. ಕೃಷಿ ವ್ಯವಸ್ಥೆ ಬಲಪಡಿಸುವುದು, ಉದ್ಯೋಗವಕಾಶ ಸೇರಿದಂತೆ 11 ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸುವ ಆಶಯವನ್ನು ಬಿಜೆಪಿ ವ್ಯಕ್ತಪಡಿಸಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications