ರೇಣುಕಾ ಹೇಳಿಕೆಗೆ ಯಡಿಯೂರಪ್ಪ ಖಂಡನೆ
ಬೆಂಗಳೂರು, ಫೆ. 8 : ಮಂಗಳೂರು ಪಬ್ ಮೇಲಿನ ದಾಳಿ ಹಾಗೂ ಕೇರಳ ಶಾಸಕರ ಪುತ್ರಿ ಅಪಹರಣ ನಾಟಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಗತ್ಯ ಕಾನೂನು ಕ್ರಮಕೈಗೊಂಡಿದೆ. ಈ ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಸಹ ಬಂಧಿಸಲಾಗಿದೆ. ಇಷ್ಟಾದರೂ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ಅವರು ವಿನಾಕಾರಣ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವ ಮೂಲಕ ಗೂಬೆ ಕೂರಿಸುವ ಕೆಲಸ ಮುಂದುವರೆಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿ ಸತ್ಯಾಸತ್ಯತೆ ಹೊರಬರಲಿದೆ ಎಂದರು. ಕೇಂದ್ರ ಸಚಿವೆ ರೇಣುಕಾ ಚೌಧರಿ ಅನಗತ್ಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು. ಮಂಗಳೂರು ಪಬ್ ದಾಳಿಯ ಬೆನ್ನಲ್ಲೇ ಕೇರಳದ ಶಾಸಕ ಸಿ ಎಚ್ ಕುಇಂಬು ಅವರ ಪುತ್ರಿ ಅಪಹರಣಕ್ಕೆ ಸಂಬಂಧಿಸಿದಂತೆ ರೇಣುಕಾ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಲ್ಲಿನ ಬಿಜೆಪಿ ಸರ್ಕಾರ ಕೋಮುವಾದಿ ಸಂಘಟನೆಗಳ ಕುಮ್ಮಕ್ಕು ನೀಡುವ ಮೂಲಕ ಕರ್ನಾಟಕವನ್ನು ತಾಲೀಬಾನಿಕರಣ ಮಾಡಲು ಹೊರಟಿದ್ದಾರೆ. ಈ ಎರಡು ಪ್ರಕರಣಗಳು ರಾಷ್ಟ್ರೀಯ ಭದ್ರತೆಯನ್ನು ಪ್ರಶ್ನಿಸುವಂತಿವೆ ಎಂದು ಎಂದು ಚೌಧರಿ ಕಳವಳ ವ್ಯಕ್ತಪಡಿಸಿದ್ದರು.
ಮಂಗಳೂರಿನಲ್ಲಿ ಸೌಹಾರ್ದ ಸಭೆ
ಪಬ್ ದಾಳಿ ಹಾಗೂ ಶಾಸಕರ ಪುತ್ರಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಗೃಹ ಸಚಿವ ವಿ ಎಸ್ ಆಚಾರ್ಯ ಮತ್ತು ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ನೇತೃತ್ವದಲ್ಲಿ ಶಾಂತಿ ಸೌಹಾರ್ದ ಸಭೆ ನಡೆಯುತು. ಸಭೆಯಲ್ಲಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಶಾಸಕರ ಪುತ್ರಿ ಅಪಹರಣ 5 ಬಂಧನ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications