ಮಾಧ್ಯಮಗಳ ಮೇಲೆ ನಿಗಾಕ್ಕೆ ಮುಂದಾದ ಸರ್ಕಾರ
ಬೆಂಗಳೂರು, ಫೆ. 9 : ಮಂಗಳೂರು ಪಬ್ ದಾಳಿ ಪ್ರಕರಣ ಹಾಗೂ ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಅವಾಂತರ ಆರುವ ಮುನ್ನವೇ ರಾಜ್ಯ ಸರ್ಕಾರ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಇದೀಗ ಮಾಧ್ಯಮಗಳ ಮೇಲೆ ಕೆಂಗಣ್ಣು ಬೀರಿರುವ ಸರ್ಕಾರ ಅತೀ ರಂಜಿತ ವರದಿಗಳ ಪ್ರಸಾರ ಮಾಡಿದ್ದಾರೆಂಬ ಎನ್ನುವ ನೆಪದಲ್ಲಿ ಪತ್ರಿಕಾ ಸ್ವಾತಂತ್ರಕ್ಕೆ ಕಡಿವಾಣ ಹಾಕಲು ಧರ್ಮಾಧಿಕಾರಿ (ಓಂಬುಡ್ಸ್ ಮನ್) ನೇಮಕ ಮಾಡಲು ನಿರ್ಧರಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ವಿಎಸ್ ಆಚಾರ್ಯ, ಇತ್ತೀಚೆಗೆ ದಿನಗಳಲ್ಲಿ ಮಾಧ್ಯಮಗಳು ಮುಖ್ಯವಾಗಿ ಎಲೆಕ್ಟ್ರಾನಿಕ್ ಮಾಧ್ಯಮಗಳ ಅತಿರಂಜಿತ ವರದಿ ಮಾಡುತ್ತಿವೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರತೊಡಗಿದೆ. ಮಂಗಳೂರು ಪಬ್ ದಾಳಿ ಹಾಗೂ ಕೇರಳ ಶಾಸಕರ ಪುತ್ರಿ ಅಪಹರಣ, ಹಿಂದೆ ನಡೆದ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ನಾಪತ್ತೆ ಪ್ರಕರಣದಲ್ಲೂ ಮಾಧ್ಯಮಗಳ ಅತಿಯಾಗಿ ವರದಿ ಮಾಡಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಯಿತು. ಆದ್ದರಿಂದ ಧರ್ಮಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಚಾರ್ಯ ವಿವರಿಸಿದರು. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಧ್ಯಮಗಳ ಪ್ರಸಾರದ ಮೇಲೆ ಕಡಿವಾಣ ಅಗತ್ಯ ಎಂದು ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದು ಆಚಾರ್ಯ ಹೇಳಿದರು.
ಎಂ ಪಿ ಪ್ರಕಾಶ ತೀವ್ರ ವಿರೋಧ
ಗೃಹ ಸಚಿವ ವಿಎಸ್ ಆಚಾರ್ಯ ಹೇಳಿಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಉಪಮುಖ್ಯಮಂತ್ರಿ ಎಂಪಿ ಪ್ರಕಾಶ, ರಾಜ್ಯದಲ್ಲಿರುವ ಅಡಳಿತದಲ್ಲಿರುವ ಬಿಜೆಪಿ ಸರ್ಕಾರ ಫ್ಯಾಸಿಸ್ಟ್ ಸಂಸ್ಕೃತಿ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಪತ್ರಿಕಾ ಸ್ವಾತಂತ್ರ ಹರಣ ಮಾಡಲು ಮುಂದಾಗಿರುವ ಸರ್ಕಾರ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಆಡಳಿತದಲ್ಲಿರುವ ಸರ್ಕಾರದ ಮೇಲೆ ಟೀಕೆ-ಟಿಪ್ಪಣಿಗಳು ಬರುವುದು ಸಹಜ. ಅದನ್ನು ಸಹಿಸಕೊಳ್ಳಬೇಕಾಗಿರುವುದು ಸರ್ಕಾರದ ಮುಖ್ಯಸ್ಥರ ಕೆಲಸ. ಅದನ್ನು ಬಿಟ್ಟು ಮಾಧ್ಯಮಗಳ ಮೇಲೆ ಕಡಿವಾಣ ಹಾಕಲು ಮುಂದಾಗಿರುವುದು ಸಂಪೂರ್ಣ ಜನ ವಿರೋಧಿ ಕೆಲಸ. ಒಂದು ವೇಳೆ ಸರ್ಕಾರ ಧರ್ಮಾಧಿಕಾರಿ ನೇಮಕ ಮಾಡಲು ಮುಂದಾದಲ್ಲಿ ಮಾಧ್ಯಮದ ಪರವಾಗಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರಕಾಶ್ ಎಚ್ಚರಿಕೆ ನೀಡಿದರು.
ಹಿಟ್ಲರ್ ಸಂಸ್ಕತಿ, ಎಚ್ ಡಿಕೆ ಆರೋಪ
ಸಚಿವ ಆಚಾರ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವ್ಯಾಖ್ಯಾನವೇ ಬೇರೆಯಾಗಿದೆ. ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತು ಪರಸ್ಥಿತಿ ಹೇರಿದಾಗಲೂ ಪತ್ರಿಕಾ ಸ್ವಾತಂತ್ರದ ಮೇಲೆ ಕಡಿವಾಣ ಹಾಕಿರಲಿಲ್ಲ ಎನ್ನುವ ಅವರು, ಕರ್ನಾಟಕದಲ್ಲಿ ಆಗುತ್ತಿರುವುದಾದರೂ ಏನು ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳ ಸ್ವಾತಂತ್ರವನ್ನು ಹರಣ ಮಾಡುವುದು ಅಕ್ಷಮ್ಯ. ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು. ರಾಜ್ಯ ಸರ್ಕಾರ ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಅವರು ಕೆಂಡಾಮಂಡಲವಾಗಿದ್ದಾರೆ. ಪತ್ರಿಕಾ ಸ್ವಾತಂತ್ರದ ಮೇಲೆ ನಿಗಾ ಹೇರಲು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications