ಬದುಕಿದ್ದಾಗಲೇ ವಾಜಪೇಯಿಗೆ ಸಂತಾಪ ಸಭೆ
ಮೈಸೂರು, ಫೆ. 9 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಹಸ್ಥಿತಿ ಸುಧಾರಿಸುತ್ತಿರುವ ವರದಿಗಳು ಏಮ್ಸ್ ಆಸ್ಪತ್ರೆಯಿಂದ ಬರುತ್ತಿರುವುದು ಸಂಭ್ರಮದ ಸಂಗತಿ. ಆದರೆ, ಅವರು ನಿಧನರಾದರೆಂದು ತಪ್ಪಾಗಿ ಅರ್ಥೈಸಿ ಸಂತಾಪ ಸೂಚಕ ಸಭೆ ನಡೆಸಿದ ವಿಚಿತ್ರ ಘಟನೆ ಮೈಸೂರು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದಿದೆ.
ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ತಮ್ಮ ಕುಂದುಕೊರತೆ ಹೇಳಿಕೊಳ್ಳಲು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಬಂದಾಗ ಈ ಘಟನೆ ನಡೆದಿದೆ. ಮಾಜಿ ಪ್ರಧಾನಿ ವಾಜಪೇಯಿಯವರು ನಿಧನರಾಗಿದ್ದಾರೆ ಈ ಸಂದರ್ಭದಲ್ಲಿ ಯಾವುದೇ ಸಭೆ ನಡೆಸಿದರೆ ಅದು ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ. ಆದುದರಿಂದ ನಿಮ್ಮ ಜೊತೆಗಿನ ಸಭೆಯನ್ನು ಮುಂದಿನ ದಿನಾಂಕದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಮಣಿವಣ್ಣನ್ ಕಬ್ಬು ಬೆಳೆಗಾರರಿಗೆ ತಿಳಿಸಿದರು ಎಂದು ಹೇಳಲಾಗಿದೆ. ಇದರಿಂದ ಗೊಂದಲಗೊಂಡ ರೈತರು ಜಿಲ್ಲಾಧಿಕಾರಿ ಕಛೇರಿಯಲ್ಲೇ ಸಂತಾಪ ಸೂಚಕ ಸಭೆ ನಡೆಸಿಯೇ ಬಿಟ್ಟರು.
ತನ್ನ ತಪ್ಪನ್ನು ಅರಿತ ಮಣಿವಣ್ಣನ್, ಕಬ್ಬು ಬೆಳೆಗಾರರು ಕಚೇರಿಯೊಳಗೆ ಆಗಮಿಸಿದಾಗ ನಾನು ದೆಹಲಿಯಿಂದ ಬಂದ ದೂರವಾಣಿ ಕರೆಯನ್ನು ಸ್ವೀಕರಿಸಿ ಮಾತನಾಡುತ್ತಿದ್ದೆ, ತಪ್ಪಾಗಿ ಅರ್ಥೈಸಿ ಸಂತಾಪ ಸೂಚಕ ಸಭೆ ನಡೆಸಲಾಗಿದೆ. ಇದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ಸಮಜಾಯಿಷಿ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications