ಎಸ್ಎಎಸ್ ತೆರಿಗೆ ಸಂಗ್ರಹ ಆರಂಭ, ಬಿಬಿಎಂಪಿ
ಬೆಂಗಳೂರು, ಫೆ. 10 : ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ (ಎಸ್ಎಎಸ್) ಅನ್ವಯ ತೆರಿಗೆ ಸಂಗ್ರಹಿಸುವ ಕ್ರಮ ಮಂಗಳವಾರದಿಂದ ಆರಂಭವಾಗಿದೆ. ಎಸ್ಎಎಸ್ ಜಾರಿಗೆ ವಿಧೇಯಕ ಅಂಗೀಕರಿಸಿದರೂ ಮಾರ್ಗಸೂಚಿಯನ್ನೂ ಸರಿಯಾಗಿ ಸಿದ್ದಪಡಿಸಿಲ್ಲ. ಗ್ರಾಹಕರಿಗೂ ಮಾಹಿತಿ ಕೈಪಿಡಿ ಮುದ್ರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಈ ಆರೋಪವನ್ನು ಬಿಬಿಎಂಪಿ ಆಯುಕ್ತರು ತಳ್ಳಿ ಹಾಕಿದ್ದು, ಎಸ್ಎಎಸ್ ಮಾದರಿಯಲ್ಲಿ ಕಂದಾಯ ಪಾವತಿ ಮಾಡಿಕೊಳ್ಳಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೈಪಿಡಿ ಮುದ್ರಿಸಲಾಗಿದ್ದು, ನಾಗರಿಕರಿಗೆ ದೊರೆಯಲಿದೆ. ಈ ಬಗ್ಗೆ ಗೊಂದಲಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಎಸ್ಎಎಸ್ ಜಾರಿಯಿಂದಾಗಿ ಹಿಂದಿನ ನಗರಸಭೆ, ಪುರಸಭೆ ಹಾಗೂ 110 ಗ್ರಾಮಗಳ ವ್ಯಾಪ್ತಿಯಲ್ಲಿ ಏಕರೂಪದ ತೆರಿಗೆ ಪದ್ಧತಿ ಅನುಸರಿಸುವಂತಾಗುತ್ತದೆ. ಇದರಿಂದ ಬಿಬಿಎಂಪಿ ಬೊಕ್ಕಸಕ್ಕೆ ಅಧಿಕ ಆದಾಯ ನಿರೀಕ್ಷಿಸಲಾಗಿದೆ. ಒಂದೂವರೆ ವರ್ಷದಿಂದ ಕಂದಾಯ ಬಾಕಿಯಿದೆ. ಈ ವ್ಯವಸ್ಥೆಗೆ ಜನರು ಕೂಡ ಸ್ಪಂದಿಸಿ ತೆರಿಗೆ ಕಟ್ಟುತ್ತಾರೆ ಎಂದು ಭಾವಿಸಲಾಗಿದೆ.
ಎಸ್ಎಎಸ್ ಪಾವತಿ ಮಾಡಿಕೊಳ್ಳಲು 271 ಕೇಂದ್ರ ತೆರೆಯಲಾಗಿದೆ. ಪ್ರತಿ ಕೇಂದ್ರದಲ್ಲಿ 5 ಮಂದಿ ಸಿಬ್ಬಂದಿಯಿದ್ದು, ಸಾರ್ವಜನಿಕರಿಗೆ ಸಹಾಯ ಮಾಡಲಿದ್ದಾರೆ. ಬೆಳಗ್ಗೆ 9 ರಿಂದ 12 ಹಾಗೂ ಸಂಜೆ 3.30 ರಿಂದ 7.30ರ ವರೆಗೆ ತೆರಿಗೆ ಸಂಗ್ರಹ ನಡೆಯಲಿದೆ. ಮಾರ್ಚ್ ಅಂತ್ಯದೊಳಗೆ ತೆರಿಗೆ ಪಾವತಿಸುವ ಗ್ರಾಹಕರಿಗೆ ಶೇ. 5 ರಷ್ಟು ರಿಯಾಯಿತಿ ಕೊಡಲಾಗುತ್ತಿದೆ. ಮೇ ತಿಂಗಳ ಒಳಗೆ ಕಂದಾಯ ಕೊಡದಿದ್ದರೆ ದಂಡ ಪಾವತಿಸಬೇಕಾಗುತ್ತಿದೆ.
(ದಟ್ಸ್ ಕನ್ನಡ ವಾರ್ತೆ)
ಫೆ. 10 ರಿಂದ ಎಸ್ಎಎಸ್ ತೆರಿಗೆ ಜಾರಿ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications