ಎಸ್ಎಎಸ್ ತೆರಿಗೆ ಸಂಗ್ರಹ ಆರಂಭ, ಬಿಬಿಎಂಪಿ
ಬೆಂಗಳೂರು, ಫೆ. 10 : ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ (ಎಸ್ಎಎಸ್) ಅನ್ವಯ ತೆರಿಗೆ ಸಂಗ್ರಹಿಸುವ ಕ್ರಮ ಮಂಗಳವಾರದಿಂದ ಆರಂಭವಾಗಿದೆ. ಎಸ್ಎಎಸ್ ಜಾರಿಗೆ ವಿಧೇಯಕ ಅಂಗೀಕರಿಸಿದರೂ ಮಾರ್ಗಸೂಚಿಯನ್ನೂ ಸರಿಯಾಗಿ ಸಿದ್ದಪಡಿಸಿಲ್ಲ. ಗ್ರಾಹಕರಿಗೂ ಮಾಹಿತಿ ಕೈಪಿಡಿ ಮುದ್ರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಈ ಆರೋಪವನ್ನು ಬಿಬಿಎಂಪಿ ಆಯುಕ್ತರು ತಳ್ಳಿ ಹಾಕಿದ್ದು, ಎಸ್ಎಎಸ್ ಮಾದರಿಯಲ್ಲಿ ಕಂದಾಯ ಪಾವತಿ ಮಾಡಿಕೊಳ್ಳಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೈಪಿಡಿ ಮುದ್ರಿಸಲಾಗಿದ್ದು, ನಾಗರಿಕರಿಗೆ ದೊರೆಯಲಿದೆ. ಈ ಬಗ್ಗೆ ಗೊಂದಲಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಎಸ್ಎಎಸ್ ಜಾರಿಯಿಂದಾಗಿ ಹಿಂದಿನ ನಗರಸಭೆ, ಪುರಸಭೆ ಹಾಗೂ 110 ಗ್ರಾಮಗಳ ವ್ಯಾಪ್ತಿಯಲ್ಲಿ ಏಕರೂಪದ ತೆರಿಗೆ ಪದ್ಧತಿ ಅನುಸರಿಸುವಂತಾಗುತ್ತದೆ. ಇದರಿಂದ ಬಿಬಿಎಂಪಿ ಬೊಕ್ಕಸಕ್ಕೆ ಅಧಿಕ ಆದಾಯ ನಿರೀಕ್ಷಿಸಲಾಗಿದೆ. ಒಂದೂವರೆ ವರ್ಷದಿಂದ ಕಂದಾಯ ಬಾಕಿಯಿದೆ. ಈ ವ್ಯವಸ್ಥೆಗೆ ಜನರು ಕೂಡ ಸ್ಪಂದಿಸಿ ತೆರಿಗೆ ಕಟ್ಟುತ್ತಾರೆ ಎಂದು ಭಾವಿಸಲಾಗಿದೆ.
ಎಸ್ಎಎಸ್ ಪಾವತಿ ಮಾಡಿಕೊಳ್ಳಲು 271 ಕೇಂದ್ರ ತೆರೆಯಲಾಗಿದೆ. ಪ್ರತಿ ಕೇಂದ್ರದಲ್ಲಿ 5 ಮಂದಿ ಸಿಬ್ಬಂದಿಯಿದ್ದು, ಸಾರ್ವಜನಿಕರಿಗೆ ಸಹಾಯ ಮಾಡಲಿದ್ದಾರೆ. ಬೆಳಗ್ಗೆ 9 ರಿಂದ 12 ಹಾಗೂ ಸಂಜೆ 3.30 ರಿಂದ 7.30ರ ವರೆಗೆ ತೆರಿಗೆ ಸಂಗ್ರಹ ನಡೆಯಲಿದೆ. ಮಾರ್ಚ್ ಅಂತ್ಯದೊಳಗೆ ತೆರಿಗೆ ಪಾವತಿಸುವ ಗ್ರಾಹಕರಿಗೆ ಶೇ. 5 ರಷ್ಟು ರಿಯಾಯಿತಿ ಕೊಡಲಾಗುತ್ತಿದೆ. ಮೇ ತಿಂಗಳ ಒಳಗೆ ಕಂದಾಯ ಕೊಡದಿದ್ದರೆ ದಂಡ ಪಾವತಿಸಬೇಕಾಗುತ್ತಿದೆ.
(ದಟ್ಸ್ ಕನ್ನಡ ವಾರ್ತೆ)
ಫೆ. 10 ರಿಂದ ಎಸ್ಎಎಸ್ ತೆರಿಗೆ ಜಾರಿ
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications