ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ, ಯಡಿಯೂರಪ್ಪ
ಬೆಂಗಳೂರು, ಫೆ. 10 : ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಪ್ರಧಾನಿ ಪಟ್ಟದಲ್ಲಿ ಕೂರಿಸುವ ಸಕಲ ತಂತ್ರಗಳನ್ನು ಹೆಣಿಯುತ್ತಿರುವ ಬಿಜೆಪಿ ಸರ್ಕಾರಕ್ಕೆ ನ್ಯಾಯಾಲಯದ ಗಡುವಿನೊಳಗೆ ಬಿಬಿಎಂಪಿ ಚುನಾವಣೆಗಳನ್ನು ನಡೆಸದಿರಲು ನಿರ್ಧರಿಸಿದೆ. ಲೋಕಸಭೆ ಚುನಾವಣೆ ನಂತರವೇ ಬಿಬಿಎಂಪಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.
ಹೀಗಂತ ಹೇಳಿದವರು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಬಿಎಂಪಿ ಚುನಾವಣೆಯನ್ನು ಲೋಕಸಭೆ ಚುನಾವಣೆ ನಂತರ ನಡೆಸಲು ನಿರ್ಧರಿಸಲಾಗಿದೆ. ಕಾರಣವೆಂದರೆ, ಇದೇ ತಿಂಗಳು 28 ರಂದು ಸಂಸತ್ ವಿಸರ್ಜನೆಯಾಗಲಿದೆ ಎನ್ನುವುದು ಅವರು ಉತ್ತರವಾಗಿದೆ. ಆದರೆ, ಕಳೆದ ಎರಡು ವರ್ಷಗಳಿಂದ ಬಿಬಿಎಂಪಿಯಲ್ಲಿ ಅಧಿಕಾರಿಗಳು ದರ್ಬಾರ್ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಗಳು ಅಧಿಕಾರ ನಡೆಸಬೇಕು ಎನ್ನುವುದು ಸಂವಿಧಾನ ಹೇಳುತ್ತಿದೆ. ಆದರೆ ಕಳೆದ ಸಮ್ಮಿಶ್ರ ಸರ್ಕಾರ ಹಾಗೂ ಇಂದಿನ ಬಿಜೆಪಿ ಸರ್ಕಾರಗಳು ಸ್ವಾರ್ಥಕ್ಕಾಗಿ ಬಿಬಿಎಂಪಿ ಚುನಾವಣೆಗಳನ್ನು ನಡೆಸದೆ ಮುಂದೂಡುತ್ತಲೇ ಎಂದು ಮಾಜಿ ಮೇಯರ್ ರಮೇಶ್ ಹೈಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಾರ್ಚ್ 10ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಸ್ಪಷ್ಟ ನಿರ್ದೇಶನ ನೀಡಿತ್ತು. ಆದರೆ, ನ್ಯಾಯಾಲಯ ನೀಡಿರುವ ಗಡುವು ಸಮೀಪಿಸುತ್ತಿದ್ದರೂ ಚುನಾವಣೆ ನಡೆಸುವ ಯಾವುದೇ ಕುರುಹುಗಳು ಸರ್ಕಾರದಿಂದ ಕಾಣುತ್ತಿಲ್ಲ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಲೋಕಸಭೆ ಚುನಾವಣೆ ನಂತರವಷ್ಟೆ ಬಿಬಿಎಂಪಿ ಚುನಾವಣೆ ಎಂದು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿಗ್ನಲ್ ರಹಿತ ರಸ್ತೆ ನಿರ್ಮಾಣ -ಯಡಿಯೂರಪ್ಪ
ಬೆಂಗಳೂರು ನಗರದಲ್ಲಿ 8 ಸಿಗ್ನಲ್ ರಹಿತ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಇದಕ್ಕಾಗಿ 650 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿರುವುದಾಗಿ ಹೇಳಿದರು. ಗುಣಮಟ್ಟದ ರಸ್ತೆಗಳ ನಿರ್ಮಾಣದ ಭರವಸೆ ನೀಡಿದ ಅವರು, ಗುತ್ತಿಗೆದಾರರ ಹಣದಾಸೆಯಿಂದ ಇತ್ತೀಚೆಗೆ ನಡೆದ ರಸ್ತೆ ಕಾಮಗಾರಿಗಳ ಗುಣಮಟ್ಟ ತೀರಾ ಕಳಪೆ ಮಟ್ಟದ್ದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಎಸ್ಎಎಸ್ ತೆರಿಗೆ ಸಂಗ್ರಹ ಆರಂಭ, ಬಿಬಿಎಂಪಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications