ನಿತ್ಯ ಯೋಗಾಭ್ಯಾಸ ಮಾಡಿ: ಮುರುಘ ಮಠಾಧೀಶ
ಮಡಿಕೇರಿ, ಫೆ. 10 : ಮಾನವನಲ್ಲಿ ದುರ್ಗುಣ ನಿರ್ಗಮನವಾಗಬೇಕು, ಸದ್ಗುಣ ಬೆಳೆಯಬೇಕು. ಭಾವ ಬಯಲಾಗಬೇಕು, ಬಯಲು ಭಾವವಾಗಬೇಕು, ಆಗ ಬದುಕು ಆನಂದಮಯವಾಗುತ್ತದೆ. ಒತ್ತಡ ಕಡಿಮೆಯಾಗುತ್ತಾ ಸಾಗುತ್ತದೆ ಎಂದು ಚಿತ್ರದುರ್ಗದ ಮುರುಘರಾಜೇಂದ್ರ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗಾಗಿ ಏರ್ಪಡಿಸಲಾಗಿದ್ದ ಒತ್ತಡ ರಹಿತ ಕೆಲಸ ನಿರ್ವಹಣೆ ಮತ್ತು ಸಮಾಜಮುಖಿ ಬದುಕು ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಮುರುಘರಾಜೇಂದ್ರ ಶ್ರೀಗಳು, ಆಧುನಿಕ ಜಗತ್ತು ಆತಂಕದ ಅವಸರದ ಜಗತ್ತಾಗಿದೆ. ಇದು ಒತ್ತಡದ ಬದುಕಿಗೆ ದಾರಿ ಮಾಡಿಕೊಡುತ್ತಿದೆ ಎಂದರು.
ಭಾರತ ಜಗತ್ತಿಗೆ ಶಾಂತಿ ಸಂದೇಶವನ್ನು ಬೋಧಿಸಿದ ದೇಶ. ಆದರೆ, ಇಂದು ನಮ್ಮ ನಡುವೆ ಅತೀ ಒತ್ತಡದ ಬದುಕಿನಿಂದ ಅಶಾಂತಿ ಸೃಷ್ಠಿಯಾಗುತ್ತಿದೆ. ಆಧ್ಯಾತ್ಮಿಕ ಆನಂದದಿಂದ ಒತ್ತಡ ಮತ್ತು ಅಶಾಂತಿಯನ್ನು ಕಡಿಮೆ ಮಾಡಲು ಸಾಧ್ಯ ಎಂದು ಸ್ವಾಮೀಜಿ ಹೇಳಿದರು. ಪ್ರತಿಭೆ, ಪರಿಶ್ರಮ, ಪ್ರಾಮಾಣಿಕತೆ, ಪ್ರಗತಿಗೆ ಸೋಪಾನ. ಈ ದಿವ್ಯಮಂತ್ರ ಎಂದೂ ಮರೆಯಬೇಡಿ ಎಂದು ಅವರು ಕಿವಿಮಾತು ಹೇಳಿದರು.
ದುಡಿಮೆಯಲ್ಲಿ ದೇವರ ಕಾಣಬೇಕು. ನಮ್ಮನ್ನು ಸದಾ ವಿಮರ್ಶೆಗೆ ಒಳಪಡಿಸಿಕೊಳ್ಳಬೇಕು. ಇಷ್ಟಪಟ್ಟು ಮಾಡಿದ ಕೆಲಸ ಕಷ್ಟವೆನಿಸದು. ಅಧಿಕಾರದ ಅಹಂಕಾರ ಬಿಟ್ಟು ಪ್ರಜಾ ಸೇವೆಯಲ್ಲಿ ಸಾರ್ಥಕತೆ ಕಾಣಬೇಕು ಎಂದು ಸ್ವಾಮೀಜಿ ನುಡಿದರು. ಕೆಲಸ ಆರಂಭಿಸುವ ಮುನ್ನ ಸ್ಪಷ್ಟ ಗುರಿ ಇರಲಿ, ಕಾಲ ಬದ್ದ ಕೆಲಸ ಅನಗತ್ಯ. ಒತ್ತಡ ನಿವಾರಿಸುತ್ತದೆ. ಅದೇ ರೀತಿ ಯಾವಾಗಲೂ ಆದ್ಯತೆಗಳ ಪಟ್ಟಿ ತಯಾರಿಸಿಕೊಂಡು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿ ಎಂದು ಮುರುಘ ಶ್ರೀ ಸಲಹೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications