ಫೆಬ್ರವರಿ 20ರಂದು ಆಯವ್ಯಯ ಮಂಡನೆ
ಗುಲಬರ್ಗಾ, ಫೆ. 10 : ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನ 2009 ಫೆಬ್ರವರಿ19 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 20 ರಂದು 2009-10ನೇ ಸಾಲಿನ ಆಯವ್ಯಯ ಮಂಡಿಸಲಾಗುವುದೆಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಗುಲಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ 2009-10ನೇ ಸಾಲಿನ ಯೋಜನಾ ಗಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುವುದಿಲ್ಲ. ರಾಜ್ಯದ ಈ ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಮತ್ತು ಆದಾಯ ಸೋರಿಕೆ ತಡೆ ಕ್ರಮಕ್ಕೆ ಹಾಗೂ ಶಿಕ್ಷಣ, ಗ್ರಾಮೀಣ ಅಭಿವೃದ್ಧಿ, ಕೃಷಿ, ನೀರಾವರಿ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೊರಾರ್ಜಿ ದೇಸಾಯಿ ಶಾಲೆ, ಡಾ ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಭಾರತದಲ್ಲಿಯೂ ಜಾಗತಿಕ ಆರ್ಥಿಕ ಮುಗ್ಗಟ್ಟಿನ ಪರಿಣಾಮ ಉಂಟಾಗಿದ್ದರೂ ರಾಜ್ಯದಲ್ಲಿ ವಾಣಿಜ್ಯ ತೆರಿಗೆಯಿಂದ 2000 ಕೋಟಿ ರೂ. ಹೆಚ್ಚು ಸಂಗ್ರಹವಾಗುವ ನಿರೀಕ್ಷೆ ಇದೆ. ರಾಜ್ಯದ 2009-10ನೇ ಸಾಲಿನ ಆಯವ್ಯಯದಲ್ಲಿ ಯೋಜನೇತರ ವೆಚ್ಚ ಕಡಿಮೆ ಮಾಡಿ ಯೋಜನಾ ವೆಚ್ಚಕ್ಕೆ ಹೆಚ್ಚು ಹಣ ನೀಡಿ ಅಭಿವೃದ್ಧಿಪರ ಆಯವ್ಯಯಕ್ಕೆ ಅಂತಿಮ ರೂಪ ಕೊಡುವ ಪ್ರಯತ್ನ ನಡೆದಿದೆ ಎಂದರು.
(ದಟ್ಸ್ ಕನ್ನಡ ವಾರ್ತೆ)
ಫೆ. 20 ರಂದು ರಾಜ್ಯ ಬಜೆಟ್ ಮಂಡನೆ: ಶೋಭಾ












Click it and Unblock the Notifications