ಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ

Kapanahalli Gavimata Utsav
ಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂ-ಮುಸ್ಲಿಂರೆನ್ನದೇ ಎಲ್ಲಾ ಜಾತಿ, ವರ್ಗಗಳ ಜನರು ಪಾಲ್ಗೊಳ್ಳುವ ಮೂಲಕ ನಮ್ಮ ನಾಡಿನ ಸಂಸ್ಕೃತಿ ಪರಂಪರೆಯನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹಬ್ಬ, ಹರಿದಿನಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ. ರಥೋತ್ಸವಗಳು ತಮ್ಮ ಹಿಂದಿನ ವೈಭವವನ್ನು ಕಳೆದುಕೊಳ್ಳುತ್ತಿವೆ. ಭವಿಷ್ಯದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಎಚ್ಚರಿಸಿದ ಶ್ರೀಗಳು ನಮ್ಮ ಮುಂದಿನ ತಲೆಮಾರಿಗೆ ನಮ್ಮ ನಾಡಿನ ಸಂಸ್ಕ್ರತಿ ಪರಂಪರೆಯನ್ನು ಉಳಿಸಿ ಪರಿಚಯಿಸಬೇಕಾಗಿದೆ ಎಂದರು.

ಹಾರನಹಳ್ಳಿ ಕೋಡಿ ಮಠದ ಸದಾಶಿವರಾಜೇಂದ್ರ ಮಹಾಸ್ವಾಮಿಗಳು, ಕಾಪನಹಳ್ಳಿ ಗವಿಮಠದ ಚಂದ್ರಶೇಖರಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕರಾದ ಬಿ.ಪ್ರಕಾಶ್, ಎಂ.ಪುಟ್ಟಸ್ವಾಮಿಗೌಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವರದರಾಜೇಗೌಡ, ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ತೋಟಪ್ಪಶೆಟ್ಟಿ, ವೀರಶೈವ ಮುಖಂಡ ಬ್ಯಾಂಕ್‌ ಪರಮೇಶ್, ಪುರಸಭೆ ಸದಸ್ಯರಾದ ಕೆ.ಎಸ್.ಹರಪ್ರಸಾದ್, ಕೆ.ಆರ್.ನೀಲಕಂಠ, ಕರವೇ ಪ್ರಧಾನಕಾರ್ಯದರ್ಶಿ ಸತೀಶ್, ಜಿಲ್ಲಾ ಕಾರ್ಯದರ್ಶಿ ಕಾಂತರಾಜು. ಬಿಜೆಪಿ ಮುಖಂಡ ಎಚ್.ಆರ್.ಕುಮಾರಸ್ವಾಮಿ, ಜೆಡಿಎಸ್ ಮುಖಂಡ ವಿ.ಡಿ.ದೇವೇಗೌಡ, ದಾನಿಗಳಾದ ಕೆ.ಬಿ.ಚಂದ್ರಶೇಖರ್, ಬಿಎಸ್‌ಪಿ ಮುಖಂಡ ವಿಠಲಾಪುರ ಸುಬ್ಬೇಗೌಡ ಮುಖ್ಯ ಅತಿಥಿಗಳಾಗಿದ್ದರು.

ಇದೇ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಶ್ರೀಮಠದ ವತಿಯಿಂದ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+