ಸತ್ಯಂ ಹಗರಣ, ರಣರಂಗವಾದ ಆಂಧ್ರ ವಿಧಾನಸಭೆ
ಹೈದರಾಬಾದ್, ಫೆ. 11 : ಲೋಕಸಭೆ ಚುನಾವಣೆಯ ಜೊತೆಗೆ ರಾಜ್ಯವಿಧಾನಸಭೆ ಚುನಾವಣೆಗಳ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆಂಧ್ರದಾದ್ಯಂತ ರಾಜಕೀಯ ಪಕ್ಷಗಳಲ್ಲಿ ಭಾರಿ ಚಟುವಟಿಕೆಗಳ ಕಂಡು ಬರತೊಡಗಿವೆ. ಈ ಮಧ್ಯೆ ಸತ್ಯಂ ಹಗರಣವನ್ನು ರಾಜಕೀಯ ಲಾಭಕ್ಕಾಗಿ ದಾಳವಾಗಿಸಿಕೊಂಡಿರುವ ಪ್ರತಿಪಕ್ಷಗಳು ತೀವ್ರ ಹೋರಾಟಕ್ಕಿಳಿದಿದ್ದರಿಂದ ಇಂದು ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಯಾಯಿತು.
ಸತ್ಯಂ ಪ್ರಕರಣ ಕಳೆದ ತಿಂಗಳು ಜನವರಿ 7 ರಂದು ಬೆಳಕಿಗೆ ಬಂದಾಗಿನಿಂದ ಆರಂಭವಾಗಿರುವ ಆರೋಪ ಪ್ರತ್ಯಾರೋಪಗಳು ಇಂದಿಗೆ ಮುಗಿಲು ಮುಟ್ಟಿವೆ ಎಂದೇ ಹೇಳಬಹುದು. ಆಡಳಿತ ಪಕ್ಷದ ಮೇಲೆ ಪ್ರತಿಗಳ ಮುಖಂಡರಾದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲರೂ ಅಕ್ಷರಶಃ ದಾಳಿ ನಡೆಸತೊಡಗಿದ್ದಾರೆ. ಇತ್ತೀಚೆಗಂತೂ ಆಂಧ್ರಪ್ರದೇಶದ ವಿಧಾನಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಡೆಸುವುದನ್ನು ಬದಿಗಿಟ್ಟಿರುವ ರಾಜಕೀಯ ಪಕ್ಷಗಳ ಮುಖಂಡರು ಸತ್ಯಂ ಹಗರಣವನ್ನು ಮುಂದೆ ಮಾಡಿಕೊಂಡು ರಾಜಕೀಯ ಲಾಭಕ್ಕಾಗಿ ಹರಸಾಹಸ ಮಾಡುತ್ತಿದ್ದಾರೆ.
ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿ ಪುತ್ರ ವೈಎಸ್ ಜಗಮೋಹನ್ ರೆಡ್ಡಿ ಒಡೆತನ 14 ಕಂಪನಿಗಳಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ. ಹಾಗೂ ಸತ್ಯಂ ಮಾಜಿ ಮುಖ್ಯಸ್ಥ ಗೋಲ್ ಮಾಲ್ ರಾಮಲಿಂಗರಾಜು ಅವರೊಂದಿಗೆ ಮುಖ್ಯಮಂತ್ರಿ ಹಾಗೂ ಅವರ ಪುತ್ರ ವೈಎಸ್ ಜಗಮೋಹನರೆಡ್ಡಿ ಅವರಿಗೆ ಸಂಬಂಧವಿದೆ ಎನ್ನುವುದು ಅಂಧ್ರಪ್ರದೇಶದ ರಾಜಕೀಯ ವಲಯದಲ್ಲಿ ಎದ್ದಿರುವ ಬಿರುಗಾಳಿಗೆ ಕಾರಣವಾಗಿದೆ. ನಿನ್ನೆ, ಮೊನ್ನೆ ಅಂಧ್ರಪ್ರದೇಶದ ವಿಧಾನಸಭೆಯಲ್ಲಿ ನಡೆದ ದಾಂಧಲೆಗಳು, ಕೂಗಾಟ, ಹಾರಾಟಗಳು ನಾಚಿಕೆ ತರಿಸುವಂತಿವೆ.
ಟಿಡಿಪಿ, ಸಿಪಿಐ (ಎಂ), ಸಿಪಿಐ, ತೆಲಂಗಾಣ ರಾಷ್ಟ್ರೀಯ ಸಮಿತಿ ಯ ಶಾಸಕರು ಸರ್ಕಾರದ ವಿರುದ್ಧ ರಣಕಹಳೆಯನ್ನು ಉದಿದ್ದಾರೆ. ಟಿಡಿಪಿಯಂತೂ ಸರ್ಕಾರದ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂದು ವಿಧಾನಸಭೆಯಲ್ಲಿ ಟಿಡಿಪಿ ಶಾಸಕರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ, ಬಾವಿಗಿಳಿದು ಪ್ರತಿಭಟನೆ ಮುಂದಾದರು. ಈ ಸಂದರ್ಭದಲ್ಲಿ ಮೀತಿಮೀರಿದ ಟಿಡಿಪಿ ಶಾಸಕರು ವಿಧಾನಸಭೆ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದರು. ಇದರಿಂದ ತೀವ್ರ ಅಸಮಾಧಾನಗೊಂಡ ರಾಜ್ಯಪಾಲರು, ಟಿಡಿಪಿಯ 55 ಶಾಸಕರನ್ನು ಒಂದು ದಿನದ ಮಟ್ಟಿಗೆ ಸದನದಿಂದ ಅಮಾನತು ಮಾಡಿದರು. ಇದರಿಂದ ಮತ್ತಷ್ಟು ಕೋಪೋದ್ರಿಕ್ತರಾದ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗುವುದನ್ನು ನಿಲ್ಲಿಸಲಿಲ್ಲ. ಇದರಿಂದ ವಿಧಾನಸಭೆ ಅಕ್ಷರಶಃ ರಣರಂಗವಾಗಿ ಪರಿಣಿಸಿತು. ಇತ್ತೀಚೆಗೆ ಸತ್ಯಂ ಹಗರಣವನ್ನು ಸಿಬಿಐಗೆ ವಹಿಸುವಂತೆ ವೈಎಸ್ ರಾಜಶೇಖರ್ ಅವರು ಪ್ರಧಾನಿಗೆ ಮನವಿಪತ್ರ ಕಳಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಪ್ರಕರಣವನ್ನು ಸಿಬಿಐಗೆ ವಹಿಸಿ: ರೆಡ್ಡಿ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications