ಮುಂಬೈ ದಾಳಿ ಪಾಕ್ ನೆಲದಿಂದ ಸಂಚು ಪಾಕ್ ಒಪ್ಪಿಗೆ
ಇಸ್ಲಾಮಾಬಾದ್, ಫೆ. 12 : ಕೊನೆಗೂ ಪಾಪಿ ಪಾಕ್ ಗೆ ಕೆಟ್ಟ ಮೇಲೆ ಬುದ್ಧಿ ಬಂತು. ಭಯೋತ್ಪಾದನೆ ಹತ್ತಿಕ್ಕುವ ಕುರಿತು ಭಾರತ ಸೇರಿದಂತೆ ಅಂತಾರಾಷ್ಟ್ರೀಯ ವಲಯದಿಂದ ಬಂದಿರುವ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಸರ್ಕಾರ, ಮುಂಬೈ ಮೇಲೆ ದಾಳಿ ನಡೆಸಲು ಪಾಕ್ ನೆಲದಿಂದಲೇ ಸಂಚು ರೂಪಿಸಿರುವ ಸತ್ಯವನ್ನು ಒಪ್ಪಿಕೊಂಡಿದೆ.
ಇಂದು ಪತ್ರಿಕಾಗೋಷ್ಠಿ ನಡೆಸಿದ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯ ಸಂಚನ್ನು ಪಾಕ್ ನೆಲದಿಂದಲೇ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಭಾರಿ ಬಿಗಿ ಭದ್ರತೆಯೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತ ಕಳುಹಿಸಿದ ಸಾಕ್ಷ್ಯಾಧಾರಗಳನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ. ಮುಂಬೈ ಭಯೋತ್ಪಾದನೆ ಪಾಕ್ ನೆಲದ ಒಂದು ಭಾಗದಿಂದ ನಡೆದಿರುವುದು ದೃಢಪಟ್ಟಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಭಾರತದ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕಸಬ್ ಸೇರಿದಂತೆ ಒಟ್ಟು ಏಳು ಮಂದಿ ವಿರುದ್ಧ ಎಫ್ಐಆರ್ (01/2009) ದಾಖಲಿಸಲಾಗಿದ್ದು, ಭಯೋತ್ಪಾದನಾ ನಿಗ್ರಹ ಘಟಕ ಸಾಂಬಾಗೆ ವಹಿಸಲಾಗಿದೆ ಎಂದು ರೆಹಮಾನ್ ತಿಳಿಸಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಭಾರತ ಇನ್ನೊ 30 ಪ್ರಶ್ನೆಗಳಿಗೆ ಉತ್ತರಿಸಿಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ. ಪಾಕ್ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದ್ದು. ಇಂದು ಸಂಜೆ ಕೇಂದ್ರ ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂಕೆ ನಾರಾಯಣನ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications