ಬೆಂಗಳೂರಿಗೆ ಎನ್ಎಸ್ ಜಿ ಘಟಕ, ಆಂಟನಿ
ಬೆಂಗಳೂರು, ಫೆ. 12 : ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ ಜಿ) ಘಟಕವನ್ನು ಮಂಜೂರು ಮಾಡುವುದೂ ಸೇರಿದಂತೆ ಬೆಂಗಳೂರಿನ ಭದ್ರತೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದರು.
ಬೆಂಗಳೂರಿನ ಭದ್ರತೆ ಪ್ರಮುಖ ಆದ್ಯತೆ ಎಂದು ಕೇಂದ್ರ ಪರಿಗಣಿಸಿದೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಪ್ರತಿಷ್ಠಿತ ಸಂಸ್ಥೆಗಳನ್ನು ಹೊಂದಿರುವ ಮತ್ತು ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಕಾಯ್ದುಕೊಂಡಿರುವ ಬೆಂಗಳೂರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹಿಂದೆ ಮುಂದೆ ನೋಡುವ ಪ್ರಶ್ನೆಯೇ ಇಲ್ಲ. ತಾವು ದೆಹಲಿಗೆ ಹಿಂತಿರುಗಿದ ನಂತರ ಈ ಸಂಬಂಧ ಚರ್ಚಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯಕ್ಕೆ ಎನ್ಎಸ್ ಜಿ ಘಟಕ ಮಂಜೂರು ಮಾಡುವ ವಿಚಾರ ತಮಗೆ ನೇರವಾಗಿ ಸಂಬಂಧಿಸಿಲ್ಲ. ಆದರೂ, ಗೃಹ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆಂಟನಿ ಭರವಸೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications