ಆಕಾಶದಲ್ಲಿ ಆಕ್ಸಿಡೆಂಟ್ ಆಗ್ಹೋಗಿದೆ!
*ಟಿ ಜಿ ಶ್ರೀನಿಧಿ,ಮೈಸೂರು
ಮೈಸೂರು, ಫೆ. 13 : ಕಳೆದ ವಾರದಲ್ಲಿ ಹೆಚ್ಚೂಕಡಿಮೆ ಪ್ರತಿ ದಿವಸವೂ ಕೇಳಿಬರುತ್ತಿರುವ ವಿಮಾನ ಅಪಘಾತ ಕೊಂಚದರಲ್ಲೇ ತಪ್ಪಿದ ಸುದ್ದಿಗಳ ನಡುವೆ ಈಗ ವಿಮಾನಗಳ ತಲೆ ಮೇಲೆ ಮೇಲೆ ಹಾರಾಡುವ ಉಪಗ್ರಹಗಳು ಅಪಘಾತಕ್ಕೀಡಾದ ಸುದ್ದಿ ಕೇಳಿಬಂದಿದೆ.
ಕಳೆದ ಮಂಗಳವಾರ ಸಂಭವಿಸಿದ ಘಟನೆಯೊಂದರಲ್ಲಿ ಬಾಹ್ಯಾಕಾಶದಲ್ಲಿ ರೌಂಡು ಹೊಡೆಯುತ್ತಿದ್ದ ಅಮೆರಿಕಾ ಹಾಗೂ ರಷ್ಯಾದ ಉಪಗ್ರಹಗಳು ಮುಖಾಮುಖಿ ಡಿಕ್ಕಿಹೊಡೆದಿವೆ. ಅಂತರಿಕ್ಷದ ಇಂತಹ ಮೊದಲ ಅಪಘಾತ ಎಂದು ಗುರುತಿಸಲಾಗಿರುವ ಈ ಘಟನೆ ಸೈಬೀರಿಯಾದ ಮೇಲೆ ಭೂಮಿಯಿಂದ ಸುಮಾರು 780 ಕಿಲೋಮೀಟರುಗಳ ಎತ್ತರದಲ್ಲಿ ಸಂಭವಿಸಿದೆ.
ಈಗಾಗಲೇ ನಿಷ್ಕ್ರಿಯವಾಗಿತ್ತು ಎನ್ನಲಾಗಿರುವ ಹೆಚ್ಚೂಕಡಿಮೆ ಸಾವಿರ ಕೆಜಿ ತೂಕದ ರಷ್ಯಾದ ಉಪಗ್ರಹ 1993ರಲ್ಲಿ ಉಡಾವಣೆಯಾಗಿತ್ತಂತೆ. ಅಪಘಾತದಲ್ಲಿ ಭಾಗಿಯಾಗಿರುವ
560ಕಿಲೋ ತೂಕದ ಇನ್ನೊಂದು ಉಪಗ್ರಹ ಅಮೆರಿಕಾದ ಇರಿಡಿಯಂ ಸಂಸ್ಥೆಗೆ ಸೇರಿದ್ದು 1997ರಲ್ಲಿ ಉಡಾವಣೆಯಾಗಿತ್ತು. ಇದು ಇರಿಡಿಯಂ ಸಂಸ್ಥೆ ಒದಗಿಸುವ ಉಪಗ್ರಹ ದೂರವಾಣಿ ಸೇವೆಗಾಗಿ ಬಳಕೆಯಾಗುತ್ತಿದ್ದ ಅನೇಕ ಉಪಗ್ರಹಗಳಲ್ಲಿ ಒಂದು.
ಈ ಉಪಗ್ರಹಗಳು ಅಪಾರ ವೇಗದಲ್ಲಿ ಒಂದಕ್ಕೊಂದು ಡಿಕ್ಕಿ ಹೊಡೆದಿರುವುದರಿಂದ ಅವೆರಡೂ ನುಚ್ಚುನೂರಾಗಿದ್ದು ಧೂಳು ಹಾಗೂ ಚೂರುಗಳ ದೊಡ್ಡದೊಂದು ಮೋಡವೇ ಸೃಷ್ಟಿಯಾಗಿದೆ. ಈ ಚೂರುಗಳು ಭೂಮಿಯ ವಾತಾವರಣ ಪ್ರವೇಶಿಸಿ ಉರಿದು ಬೂದಿಯಾದರೆ ಪರವಾಗಿಲ್ಲ, ಹಾಗಾಗದೆ ಅವೇನಾದರೂ ಅಂತರಿಕ್ಷದಲ್ಲೇ ಉಳಿದುಕೊಂಡರೆ ಇತರ ಉಪಗ್ರಹಗಳು ಹಾಗೂ ಅಂತರಿಕ್ಷಯಾನಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
1957ರಿಂದ ಈಚೆಗೆ ಉಡಾವಣೆಯಾಗಿರುವ ಉಪಗ್ರಹಗಳ ಸಂಖ್ಯೆ ಸುಮಾರು ಆರು ಸಾವಿರ ತಲುಪಿರುವುದು ಬಾಹ್ಯಾಕಾಶದ ಟ್ರಾಫಿಕ್ಕನ್ನು ಹೆಚ್ಚಿಸಿದ್ದು ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ಹೆಚ್ಚಾಗಲಿವೆಯೇ ಎಂಬ ಸಂಶಯ ಹುಟ್ಟುಹಾಕಿದೆ.
ಅಮೆರಿಕದಲ್ಲಿ ವಿಮಾನ ದುರಂತ, 49 ಸಾವು
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications