ಆಕಾಶದಲ್ಲಿ ಆಕ್ಸಿಡೆಂಟ್ ಆಗ್ಹೋಗಿದೆ!
*ಟಿ ಜಿ ಶ್ರೀನಿಧಿ,ಮೈಸೂರು
ಮೈಸೂರು, ಫೆ. 13 : ಕಳೆದ ವಾರದಲ್ಲಿ ಹೆಚ್ಚೂಕಡಿಮೆ ಪ್ರತಿ ದಿವಸವೂ ಕೇಳಿಬರುತ್ತಿರುವ ವಿಮಾನ ಅಪಘಾತ ಕೊಂಚದರಲ್ಲೇ ತಪ್ಪಿದ ಸುದ್ದಿಗಳ ನಡುವೆ ಈಗ ವಿಮಾನಗಳ ತಲೆ ಮೇಲೆ ಮೇಲೆ ಹಾರಾಡುವ ಉಪಗ್ರಹಗಳು ಅಪಘಾತಕ್ಕೀಡಾದ ಸುದ್ದಿ ಕೇಳಿಬಂದಿದೆ.
ಕಳೆದ ಮಂಗಳವಾರ ಸಂಭವಿಸಿದ ಘಟನೆಯೊಂದರಲ್ಲಿ ಬಾಹ್ಯಾಕಾಶದಲ್ಲಿ ರೌಂಡು ಹೊಡೆಯುತ್ತಿದ್ದ ಅಮೆರಿಕಾ ಹಾಗೂ ರಷ್ಯಾದ ಉಪಗ್ರಹಗಳು ಮುಖಾಮುಖಿ ಡಿಕ್ಕಿಹೊಡೆದಿವೆ. ಅಂತರಿಕ್ಷದ ಇಂತಹ ಮೊದಲ ಅಪಘಾತ ಎಂದು ಗುರುತಿಸಲಾಗಿರುವ ಈ ಘಟನೆ ಸೈಬೀರಿಯಾದ ಮೇಲೆ ಭೂಮಿಯಿಂದ ಸುಮಾರು 780 ಕಿಲೋಮೀಟರುಗಳ ಎತ್ತರದಲ್ಲಿ ಸಂಭವಿಸಿದೆ.
ಈಗಾಗಲೇ ನಿಷ್ಕ್ರಿಯವಾಗಿತ್ತು ಎನ್ನಲಾಗಿರುವ ಹೆಚ್ಚೂಕಡಿಮೆ ಸಾವಿರ ಕೆಜಿ ತೂಕದ ರಷ್ಯಾದ ಉಪಗ್ರಹ 1993ರಲ್ಲಿ ಉಡಾವಣೆಯಾಗಿತ್ತಂತೆ. ಅಪಘಾತದಲ್ಲಿ ಭಾಗಿಯಾಗಿರುವ
560ಕಿಲೋ ತೂಕದ ಇನ್ನೊಂದು ಉಪಗ್ರಹ ಅಮೆರಿಕಾದ ಇರಿಡಿಯಂ ಸಂಸ್ಥೆಗೆ ಸೇರಿದ್ದು 1997ರಲ್ಲಿ ಉಡಾವಣೆಯಾಗಿತ್ತು. ಇದು ಇರಿಡಿಯಂ ಸಂಸ್ಥೆ ಒದಗಿಸುವ ಉಪಗ್ರಹ ದೂರವಾಣಿ ಸೇವೆಗಾಗಿ ಬಳಕೆಯಾಗುತ್ತಿದ್ದ ಅನೇಕ ಉಪಗ್ರಹಗಳಲ್ಲಿ ಒಂದು.
ಈ ಉಪಗ್ರಹಗಳು ಅಪಾರ ವೇಗದಲ್ಲಿ ಒಂದಕ್ಕೊಂದು ಡಿಕ್ಕಿ ಹೊಡೆದಿರುವುದರಿಂದ ಅವೆರಡೂ ನುಚ್ಚುನೂರಾಗಿದ್ದು ಧೂಳು ಹಾಗೂ ಚೂರುಗಳ ದೊಡ್ಡದೊಂದು ಮೋಡವೇ ಸೃಷ್ಟಿಯಾಗಿದೆ. ಈ ಚೂರುಗಳು ಭೂಮಿಯ ವಾತಾವರಣ ಪ್ರವೇಶಿಸಿ ಉರಿದು ಬೂದಿಯಾದರೆ ಪರವಾಗಿಲ್ಲ, ಹಾಗಾಗದೆ ಅವೇನಾದರೂ ಅಂತರಿಕ್ಷದಲ್ಲೇ ಉಳಿದುಕೊಂಡರೆ ಇತರ ಉಪಗ್ರಹಗಳು ಹಾಗೂ ಅಂತರಿಕ್ಷಯಾನಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
1957ರಿಂದ ಈಚೆಗೆ ಉಡಾವಣೆಯಾಗಿರುವ ಉಪಗ್ರಹಗಳ ಸಂಖ್ಯೆ ಸುಮಾರು ಆರು ಸಾವಿರ ತಲುಪಿರುವುದು ಬಾಹ್ಯಾಕಾಶದ ಟ್ರಾಫಿಕ್ಕನ್ನು ಹೆಚ್ಚಿಸಿದ್ದು ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ಹೆಚ್ಚಾಗಲಿವೆಯೇ ಎಂಬ ಸಂಶಯ ಹುಟ್ಟುಹಾಕಿದೆ.
ಅಮೆರಿಕದಲ್ಲಿ ವಿಮಾನ ದುರಂತ, 49 ಸಾವು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications