ರೈಲ್ವೆ ಬಜೆಟ್ ಅನ್ಯಾಯ, ಸಿಎಂ ಪಿಎಂಗೆ ಪತ್ರ
ಬೆಂಗಳೂರು, ಫೆ. 15 : ಕೇಂದ್ರ ರೈಲ್ವೆ ಬಜೆಟ್ ರಾಜ್ಯದ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಮುಖ್ಯಮಂತ್ರಿ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಡೀ ದೇಶದಲ್ಲಿ ರಾಜ್ಯ ಸರ್ಕಾರ ಶೇ. 50ರಷ್ಟು ಹಣ ವಿನಿಯೋಗಿಸುವ ಒಪ್ಪಂದಕ್ಕೆ ಸಹಿ ಹಾಕಿ, ಆ ನಿಟ್ಟಿನಲ್ಲಿ ಹೆಚ್ಚು ಹಣ ಕೂಡ ಖರ್ಚು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳದ ರೈಲ್ವೆ ಇಲಾಖೆ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಿದೆ ಎಂದು ಯಡಿಯೂರಪ್ಪ ಪತ್ರದಲ್ಲಿ ಆಕ್ಷೇಪಿಸಿದ್ದಾರೆ. ಹಲವು ಪ್ರಮುಖ ಯೋಜನೆಗಳ ಬಗ್ಗೆ ಆಗಾಗ್ಗೆ ಪತ್ರ ಬರೆದು ಮನವಿ ಮಾಡುತ್ತಿದ್ದರೂ ಅವುಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗುತ್ತಿದೆ. ಇದರಿಂದ ರಾಜ್ಯದ ಜನ ಬೇಸತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ಈ ಮಲತಾಯಿ ಧೋರಣೆಯೇ ಸರಿಯೇ ಎಂದು ಪ್ರಶ್ನಿಸಿರುವ ಅವರು, ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲಿದೆ ಎಂದು ಅವರು ಎಚ್ಚರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಬಜೆಟ್, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಸುಣ್ಣ












Click it and Unblock the Notifications