ಲೋಕಸಭೆ ಚುನಾವಣೆಗೆ ರಂಗ ತಾಲೀಮು
ಬೆಂಗಳೂರು, ಫೆ. 16 ಲೋಕಸಭೆ ಚುನಾವಣೆಗಳು ಸಮೀಪಿಸಿತೊಡಗಿದ್ದು, ಗೆಲ್ಲುವ ಅಭ್ಯರ್ಥಿಗಳಿಗಾಗಿ ಮೂರು ಪ್ರಮುಖ ಪಕ್ಷಗಳಲ್ಲಿ ಭಾರಿ ಹುಡುಕಾಟ ಆರಂಭವಾಗಿದೆ. ಆಡಳಿತರೂಢ ಬಿಜೆಪಿಗೂ ಕೂಡ ಗೆಲ್ಲುವ ಅಭ್ಯರ್ಥಿಗಳು ಶೋಧನಕಾರ್ಯ ದೊಡ್ಡ ಸಮಸ್ಯೆಯಾಗಿಯೇ ಪರಿಣಮಿಸಿದೆ. ಕಾಂಗ್ರೆಸ್ ನಿಂದ ಹಿರಿಯ ಹುಲಿಗಳೆಲ್ಲಾ ಕಣಕ್ಕಿಳಿಯುವ ಸಾದ್ಯತೆಗಳಿವೆ. ಜೆಡಿಎಸ್ ಮತ್ತು ಬಿಜೆಪಿಯಲ್ಲಿ ಸೂಕ್ತ ಎನ್ನುವ ಅಭ್ಯರ್ಥಿಗಳು ಕೊರತೆ ಎದ್ದು ಕಾಣತೊಡಗಿದೆ.
ಕಂದಾಯ ಸಚಿವ ಕರುಣಾಕರರೆಡ್ಡಿ ಸೇರಿ 18 ಮಂದಿ ಬಿಜೆಪಿ ಸಂಸದರು ಕಳೆದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ, ಅದರಲ್ಲಿ ಎಚ್ ಟಿ ಸಾಂಗ್ಲಿಯಾನ, ಮಂಜುನಾಥ್ ಕುನ್ನೂರು, ಮನೋರಮಾ ಮಧ್ವರಾಜ ಪಕ್ಷದಿಂದ ಉಚ್ಚಾಟನೆಗೊಂಡಿದ್ದರೆ, ಚಿಕ್ಕಮಗಳೂರು ಸಂಸದರಾಗಿದ್ದ ಶ್ರೀಕಂಠಪ್ಪ ನಿಧನರಾಗಿದ್ದಾರೆ. ತುಮಕೂರು ಸಂಸದ ಮಲ್ಲಿಕಾರ್ಜುಯ್ಯ ಅವರು ಅನಾರೋಗ್ಯದಿಂದ ಬಳಲುತ್ತಿರುವುದು ಬಿಜೆಪಿ ಪಾಳೆಯಕ್ಕೆ ನುಂಗಲಾರದ ತುತ್ತಾಗಿದೆ.
ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ಕೋಲಾರದಲ್ಲಿ ಅಭ್ಯರ್ಥಿಗಳೆ ಇಲ್ಲದಂತಾಗಿದೆ. ತುಮಕೂರಿಗೆ ನಟ ಜಗ್ಗೇಶ್ ಇಲ್ಲವೇ ಮಾಜಿ ಸಚಿವ ಸಿ ಚೆನ್ನಿಗಪ್ಪ ಅವರು ಸ್ಪರ್ಧಿಸುವ ಸಾಧ್ಯತೆಗಳಿವೆ.
ಬೆಂಗಳೂರು ಉತ್ತರಕ್ಕೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೆಂಕಟಾಚಲ, ಕೋಲಾರಕ್ಕೆ ಹಾಲಿ ಕಾಂಗ್ರೆಸ್ ಶಾಸಕ ಡಿ ಸುಧಾಕರ್ ಬಿಜೆಪಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹಾಸನದಲ್ಲಿ ದೇವೇಗೌಡರ ವಿರುದ್ಧ ಮಾಜಿ ಸಚಿವ ಬಿ ಶಿವರಾಂ ಅವರನ್ನು ಪಕ್ಷಕ್ಕೆ ಸೆಳೆದುಕೊಂಡು ಅಖಾಡಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.
ಈ ಮಧ್ಯೆ ಜೆಡಿಎಸ್ ಕೂಡಾ ಭರ್ಜರಿ ತಯಾರಿ ನಡೆಸುತ್ತಿದ್ದು, ಬೆಂಗಳೂರು ಗ್ರಾಮಾಂತರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಂಡ್ಯಕ್ಕೆ ಚೆಲುವರಾಯಸ್ವಾಮಿ, ಬೆಂಗಳೂರು ಕೇಂದ್ರಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್, ಹಾಸನಕ್ಕೆ ದೇವೇಗೌಡ, ಮೈಸೂರು ಹಾಲಿ ಶಾಸಕ ಸಾ ರಾ ಮಹೇಶ್, ಬೆಂಗಳೂರು ಉತ್ತರಕ್ಕೆ ಕೆ ಸಿ ರಾಮಮೂರ್ತಿ, ಹಾವೇರಿಗೆ ಹುಲಿನಾಯ್ಕರ್, ಕೋಲಾರ, ರಾಯಚೂರು ಹಾಗೂ ಕೊಪ್ಪಳಕ್ಕೆ ಸೂಕ್ತ ಅಭ್ಯರ್ಥಿಗಳ ಹುಡುಕಾಟ ಆರಂಭವಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆಗೆ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ, ಕೃಷ್ಣ
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications