ಸಿದ್ದರಾಮಯ್ಯ ವಿರೋಧಿ ಪಕ್ಷದ ನಾಯಕ ಸಾಧ್ಯತೆ
ಬೆಂಗಳೂರು, ಫೆ. 16 : ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯ ಎನಿಸಿರುವ ಸಿದ್ದರಾಮಯ್ಯ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಹೈಕಮಾಂಡ್ ಆಸಕ್ತಿ ವಹಿಸಿದೆ. ಪ್ರತಿಪಕ್ಷದ ನಾಯಕವಾಗಿರುವ ಮಲ್ಲಿಕಾರ್ಜುನ ಖರ್ಗೆ ಜಾಗದಲ್ಲಿ ಸಿದ್ದು ಕೂರಿಸಲು ಸೋನಿಯಾ ಗಾಂಧಿ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹಾಗೂ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ದೆಹಲಿಗೆ ಬರಲು ಸೂಚನೆ ಬಂದಿದ್ದು, ಅವರು ದೆಹಲಿಗೆ ತೆರಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಹಠ ತೊಟ್ಟಂತಿರುವ ಕಾಂಗ್ರೆಸ್ ಪಕ್ಷ ತನ್ನ ಹಿರಿಯ ಮುಖಂಡರನ್ನು ಅಖಾಡಕ್ಕಿಳಿಸಲು ಸಿದ್ದತೆ ಮಾಡಿಕೊಳ್ಳತೊಡಗಿದೆ. ಒಂದು ಮೂಲದ ಪ್ರಕಾರ ಖರ್ಗೆ ಅವರನ್ನು ಗುಲ್ಬರ್ಗಾ ಕ್ಷೇತ್ರ ಹಾಗೂ ಧರ್ಮಸಿಂಗ್ ಅವರನ್ನು ಬೀದರ್ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಆದೆರ ಈ ಇಬ್ಬರೂ ನಾಯಕರಿಗೂ ದೆಹಲಿ ರಾಜಕಾರಣ ಅಷ್ಟಕಷ್ಟೆ. ಅದರೆ, ಹೈಕಮಾಂಡ್ ಅನುಮತಿ ನೀಡಿದರೆ ಸ್ಪರ್ಧೆ ಮಾಡಲೆಬೇಕಾಗುತ್ತದೆ.
ಖರ್ಗೆ ಅವರಿಗೆ ಲೋಕಸಭೆ ಸ್ಪರ್ಧೆ ಎಳ್ಳಷ್ಟು ಮನಸ್ಸಿಲ್ಲ. ಆದರೂ ಸೋನಿಯಾ ಗಾಂಧಿ ಆದೇಶ ಮೀರಲು ಅವರು ತಯಾರಿಲ್ಲ. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಸ್ಥಾನ ಹಾಗೂ ಖರ್ಗೆ ಪುತ್ರನಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ನೀಡುವುದಾಗಿ ಹೈಕಮಾಂಡ್ ಆಮಿಷ ಒಡ್ಡಿದೆ ಎನ್ನಲಾಗಿದೆ. ಇದಕ್ಕೆ ಖರ್ಗೆ ತೆಲೆಯಾಡಿಸಿರುವ ಸುದ್ದಿಯೂ ದಟ್ಟವಾಗಿದೆ.
ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬಿಡಾರ ಹೂಡಿದ್ದು, ಮೂರು ವಿಷಯಗಳು ಕುರಿತು ಗಂಭೀರ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮುಖ್ಯವಾಗಿ ಸಿದ್ದು ಅವರಿಗೆ ಪಕ್ಷದಲ್ಲಿ ಪ್ರತಿಪಕ್ಷ ಸ್ಥಾನ ನೀಡುವಲ್ಲಿ ಇರುವ ಗೊಂದಲ ನಿವಾರಣೆ. ರಾಜ್ಯ ಕಾಂಗ್ರೆಸ್ ಪುನಾರಚನೆ ಮಾಡುವುದು. ಸಿದ್ದರಾಮಯ್ಯ ಬೆಂಬಲಿಗರಿಗೆ ಬಳಿಸಿಕೊಳ್ಳುವುದರ ಜೊತೆಗೆ ಪಕ್ಷದಲ್ಲಿರುವ ಯುವಕರಿಗೆ ಹೆಚ್ಚಿನೆ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ದೆಹಲಿ ಮೂಲಗಳಿಂದ ತಿಳಿದು ಬಂದಿದೆ.
(ದಟ್ಸ್ ಕನ್ನಡ ವಾರ್ತೆ)
ರಾಜಕೀಯದಲ್ಲಿ ಭಾರಿ ಬದಲಾವಣೆ, ಭವಿಷ್ಯ
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications