ನನ್ನ ವಿರುದ್ದ ಕೇಸು, ರಾಜಕೀಯ ಸಂಚು, ರೇಣುಕಾ ಚೌಧರಿ
ನವದೆಹಲಿ, ಫೆ. 17 : ಮಂಗಳೂರು ಪಬ್ ದಾಳಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳತೊಡಗಿದೆ. ಮಂಗಳೂರು ಮೇಯರ್ ಕ್ರಿಮಿನಲ್ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಕೇಂದ್ರದ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ, ತಮ್ಮ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಅವರು ಕಿಡಿಕಾರಿದ್ದಾರೆ.
ಸಂಸತ್ತಿನ ಆವರಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರ ಗಮನವನ್ನು ಬೇರೆಡೆ ಸೆಳೆಯಲು ಭಾರಿ ತಂತ್ರ ರೂಪಿಸಿ ನನ್ನ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು. ಪಬ್ ದಾಳಿ ಪ್ರಕರಣದಲ್ಲಿ ಯುವತಿಯರನ್ನು ಹೀನಾಯವಾಗಿ ನಡೆಸಿಕೊಂಡಿರುವುದು ಸ್ಪಷ್ಟ. ಇದನ್ನು ಪ್ರಶ್ನಿಸಿದ ನನಗೆ ಅಲ್ಲಿನ ಸರ್ಕಾರ ನನ್ನ ವಿರುದ್ಧ ಕೇಸು ದಾಖಲಿಸುವಂತೆ ಪ್ರೇರೆಪಿಸಿದೆ ಎಂದು ಟೀಕಿಸಿದ ಅವರು, ಕೋಮು ಪ್ರಚೋದನಾಕಾರಿ ಹೇಳಿಕೆ ಎಂದು ಬಿಜೆಪಿ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ಚೌಧರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಘಟನೆಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಸ್ಪಷ್ಟಪಡಿಸಿದ ಚೌಧರಿ, ನನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೂ ಯಾರೂ ಮಾತನಾಡದಿರುವುದು ದುರದೃಷ್ಟಕರ ಸಂಗತಿ ಎಂದು ಅವರು ಹೇಳಿದರು. ಮಂಗಳೂರು ಸಿಜೆಎಂ ನ್ಯಾಯಾಲಯದಲ್ಲಿ ಸಚಿವೆ ರೇಣುಕಾ ಚೌಧರಿ ವಿರುದ್ಧ ಮೇಯರ್ ಗಣೇಶ್ ಹೊಸಬೆಟ್ಟು ಹಾಗೂ ಮತ್ತಿತರರ ಪರವಾಗಿ ನ್ಯಾಯವಾದಿ ಪಿಪಿ ಹೆಗ್ಡೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಮಂಗಳೂರಿನಲ್ಲಿ ಮುಸ್ಲಿಂ ಹುಡುಗರು ಹಿಂದೂ ಹುಡುಗಿಯನ್ನು ಮಾತನಾಡಿಸಿದರೆ ಹಲ್ಲೆ ನಡೆಸುತ್ತಾರೆ. ಹಾಗೂ ಮಂಗಳೂರು ತಾಲೀಬಾನಿಕರಣಗೊಂಡಿದೆ ಎಂಬ ಹೇಳಿಕೆಯನ್ನು ರೇಣುಕಾ ಚೌಧರಿ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಪಬ್ ಸಂಸ್ಕೃತಿಗೆ ಅವಕಾಶ ನೀಡುವುದಿಲ್ಲ: ಸಿಎಂ
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications