ಎಸ್ ಬಿಐ ಉದ್ಯೋಗಿಗಳ ದೇಶವ್ಯಾಪಿ ಮುಷ್ಕರ
ಬೆಂಗಳೂರು, ಫೆ. 17 : ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸೇರಿದಂತೆ ಸ್ಟೇಟ್ ಬ್ಯಾಂಕ್ ಇಂಡಿಯಾದ ಸಹವರ್ತಿ ಬ್ಯಾಂಕುಗಳ ಉದ್ಯೋಗಿಗಳು ಎಸ್ ಬಿಐ ಜತೆ ಸಹವರ್ತಿ ಬ್ಯಾಂಕುಗಳ ವಿಲೀನ ವಿರೋಧಿಸಿ ಇಂದು ದೇಶಾದ್ಯಂತ ಮುಷ್ಕರ ಆರಂಭಿಸಿದ್ದು, ಈ ಬ್ಯಾಂಕಿಗೆ ಸಂಬಂಧಿಸಿದ ಎಲ್ಲ ವ್ಯವಹಾರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಬೆಂಗಳೂರಿನಲ್ಲಿಯೂ ಕೂಡ ಮುಷ್ಕರ ಬಿಸಿ ತಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ. ಉದ್ಯೋಗಿಗಳು ಮಾತ್ರ ಕೆಲಸಕ್ಕೆ ರಜೆ ಹಾಕಿ ಮುಷ್ಕರದಲ್ಲಿ ನಿರತರಾಗಿದ್ದಾರೆ.
ದೇಶಾದ್ಯಂತ ಸುಮಾರು 60 ಸಾವಿರಕ್ಕೂ ಅಧಿಕ ಉದ್ಯೋಗಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಎಸ್ ಬಿ ಐ ಜತೆಗೆ ಸಹವರ್ತಿ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿದ್ದು, ಇತರೆ ಬ್ಯಾಂಕುಗಳ ಉದ್ಯೋಗಿಗಳು ಪಡೆಯುತ್ತಿರುವ ಸವಲತ್ತುಗಳನ್ನು ನಮಗೂ ನೀಡಬೇಕು ಎನ್ನುವುದು ಮುಷ್ಕರ ನಿರತರ ಪ್ರಮುಖ ಬೇಡಿಕೆಯಾಗಿದೆ. ಸವಲತ್ತುಗಳ ವಿಸ್ತರಣೆ, ಕಡಿಮೆ ಬಡ್ಡಿ ದರದಲ್ಲಿ ಮನೆ ಸಾಲ ನೀಡುವುದು. ಒವರ್ ಡ್ರಾಫ್ಟ್ ಫೆಸಿಲಿಟಿ, ಫೆಸ್ಟಿವಲ್ ಲೋನ್ ಗಳನ್ನು ನೀಡುವುದು ಇತರ ಬೇಡಿಕೆಗಳಾಗಿವೆ.
ಎಸ್ ಬಿಐ ಆಡಳಿತ ಮಂಡಳಿಯೊಂದಿಗೆ ನಡೆದ ಮಾತುಕತೆ ವಿಫಲವಾಗಿದ್ದರಿಂದ ಒಂದು ದಿನದ ದೇಶವ್ಯಾಪಿ ಮುಷ್ಕರ ನಡೆಸುತ್ತಿರುವುದಾಗಿ ಪ್ರತಿಭಟನಾಕಾರರು ಸ್ಪಷ್ಟಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications