ದೇಶ ಕಟ್ಟಲು ಯುವಶಕ್ತಿ ಬಳಕೆ, ಯಡಿಯೂರಪ್ಪ
ಶಿವಮೊಗ್ಗ, ಫೆ. 17 : ಸ್ವಾತಂತ್ರ್ಯ ನಂತರ ದೇಶ ಕಟ್ಟಲು ಅಗತ್ಯವಾಗಿದ್ದ ನಮ್ಮ ಯುವಶಕ್ತಿಯ ಸದ್ಭಳಕೆಯನ್ನು ಮಾಡುವ ಬಗ್ಗೆ ಯಾರೂ ಚಿಂತಿಸಲೇ ಇಲ್ಲ. 21ನೇ ಶತಮಾನ ನಮ್ಮದಾಗಬೇಕು. ಇದಕ್ಕಾಗಿ ನಮ್ಮ ಯುವಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಕರ್ನಾಟಕ ಈ ಯತ್ನದಲ್ಲಿ ದೇಶಕ್ಕೆ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಭಯೋತ್ಪಾದನಾ ವಿರೋಧಿ ವಿದ್ಯಾರ್ಥಿ ಜಾಗೃತಿ ಅಭಿಯಾನದ ಸಂಕಲ್ಪ ಸಮಾವೇಶವನ್ನು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಮುಂದಿನ ದಿನಗಳಲ್ಲಿ ಉದ್ಯೋಗ, ಊಟಕ್ಕಾಗಿ ಯುವಜನಾಂಗ ಪರಿತಪಿಸದಂತಹ ವ್ಯವಸ್ಥೆ ನಿರ್ಮಾಣವಾಗಬೇಕು ಎಂದರು. ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ವಲಸೆ ಬರುತ್ತಿರುವುದು ಪ್ರಸಕ್ತ ಸನ್ನಿವೇಶದ ಬಹುಮುಖ್ಯ ಸಮಸ್ಯೆಯಾಗಿದ್ದು , ಪ್ರತಿಯೊಬ್ಬ ಪ್ರಜೆಯು ಗೌರವದಿಂದ ಬಾಳುವಂತಹ ಪರಿಸ್ಥಿತಿಯನ್ನು ನಿರ್ಮಿಸುವುದು ನಮ್ಮ ಸರಕಾರದ ಉದ್ದೇಶವಾಗಿದೆ ಎಂದರು.
ಸಂಸ್ಕೃತಿ, ಪರಂಪರೆ, ಆಧ್ಯಾತ್ಮ ನಮ್ಮ ದೇಶದ ಬಹು ಮುಖ್ಯ ಶಕ್ತಿಯಾಗಿದ್ದು, ಈ ಶಕ್ತಿಯಿಂದಲೇ 21ನೇ ಶತಮಾನದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಿದೆ. ನಮ್ಮಲ್ಲಿ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಹೇರಳವಾಗಿದ್ದು , ಈ ಸಂಪನ್ಮೂಲಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವಂತಹ ಯೋಜನೆಗಳು ಕಾರ್ಯಗತಗೊಳ್ಳಬೇಕಾಗಿದೆ. ಸನಾತನ ಶಿಕ್ಷಣ ವ್ಯವಸ್ಥೆ ನಾಶದಿಂದ ನಮ್ಮಲ್ಲಿ ಸ್ವಾಭಿಮಾನ ಕೊರತೆಯಾಗಿದ್ದು, ಈ ವಿಷಯದ ಬಗ್ಗೆ ಸಮಗ್ರವಾಗಿ ಚಿಂತಿಸಿ, ಪಠ್ಯಕ್ರಮದಲ್ಲಿ ಆಧ್ಯಾತ್ಮಿಕ , ಸಾಂಸ್ಕೃತಿಕ, ಐತಿಹಾಸಿಕ ವಿಷಯಗಳನ್ನು ಅಳವಡಿಸಬೇಕಿದೆ ಎಂದು ಬ್ರಿಟಿಷ್ ಪಾರ್ಲಿಮೆಂಟಿನಲ್ಲಿ ಲಾರ್ಡ್ ಮೆಕಾಲೇ ಹೇಳಿದ ಮಾತು ಅಕ್ಷರಶ: ಸತ್ಯವಾಗಿದ್ದು , ಈ ಭಾಷಣದ ಪ್ರತಿಯನ್ನು ನಮ್ಮ ಯುವಜನಾಂಗಕ್ಕೆ ತಿಳಿಸುವ ನಿಟ್ಟಿನಲ್ಲಿ ಎಲ್ಲಾ ಕಾಲೇಜುಗಳಿಗೆ ಭಾಷಣದ ಪ್ರತಿಯನ್ನು ತಲುಪಿಸುವ ಕೆಲಸವನ್ನು ಮಾಡಲಾಗುವುದು ಎಂದರು.
ಮುಖ್ಯ ಭಾಷಣಕಾರರಾದ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರು, ವೈಯಕ್ತಿಕ ರಾಜಕೀಯ ಸಿದ್ಧಾಂತಗಳನ್ನು ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಭಯೋತ್ಫಾದನೆಯನ್ನು ಎದುರಿಸಬೇಕು. ದೇಶದ್ರೋಹಿಗಳನ್ನು ಎದುರಿಸುವಾಗ ಐಕ್ಯತೆಯನ್ನು ಮೆರೆಯಬೇಕು. ರಾಜಕೀಯ ಚಿಂತನೆ ವಿಭಿನ್ನವಾಗಿದ್ದರೂ, ಒಳ್ಳೆಯ ಕೆಲಸಕ್ಕೆ ಎಲ್ಲರ ಬೆಂಬಲದ ಅಗತ್ಯ ವಿದೆ. ಭಯೋತ್ಪಾಧನೆಗೆ ಮರಣದಂಡನೆಯೇ ಸೂಕ್ತ ಶಿಕ್ಷೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾಧನಾ ಪಿಡುಗು ದೇಶವನ್ನು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿಸಿದ್ದರೂ, ಮುಂಬೈ ಭಯೋತ್ಪಾಧನೆ ದೇಶಕ್ಕಾದ ಅವಮಾನ ಎಂಬ ಭಾವನೆ ಪ್ರತಿಯೊಬ್ಬ ಭಾರತೀಯನಲ್ಲೂ ಮೂಡಿದ್ದು , ಭಯೋತ್ಪಾಧನೆ ವಿರುದ್ದ ದೇಶವೇ ಒಂದಾಗಿ ನಿಂತಿದೆ ಎಂದರು.
(ದಟ್ಸ್ ಕನ್ನಡ ವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications