ಚುನಾವಣಾ ಆಯುಕ್ತರಾಗಿ ಸುಧಾಕರ್ ರಾವ್?
ಬೆಂಗಳೂರು, ಫೆ. 18: ರಾಜ್ಯದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರನ್ನು ಈಗಿನ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಅವರ ಸ್ಥಾನದಲ್ಲಿ ಕೂರಿಸುವ ಸಾಧ್ಯತೆಗಳಿವೆ. ಚಾವ್ಲಾ ಅವರು ಮುಂದಿನ ಮುಖ್ಯ ಚುನಾವಣಾಧಿಕಾರಿಯಾಗುವ ಎಲ್ಲಾ ಲಕ್ಷಣಗಳು ಕಂಡು ಬಂದಿವೆ. ಏಪ್ರಿಲ್ ವೇಳೆಗೆ ಎನ್ ಗೋಪಾಲಸ್ವಾಮಿ ಅವರಿಂದ ತೆರವಾಗುವ ಸ್ಥಾನವನ್ನು ನವೀನ್ ಚಾವ್ಲಾ ಅಲಂಕರಿಸಲಿದ್ದಾರೆ.
ಕರ್ನಾಟಕದ ಮೂಲದವರಾದರೂ ಸುಧಾಕರ್ ರಾವ್ ಅವರು ದೆಹಲಿ ನಿವಾಸಿ. 1973 ರ ಐಎಎಸ್ ತಂಡಕ್ಕೆ ಸೇರಿರುವ ಸುಧಾಕರ್ ರಾವ್ ಅವರ ಅಧಿಕಾರ ಅವಧಿ(ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ) ಸೆಪ್ಟೆಂಬರ್ ಗೆ ಕೊನೆಗೊಳ್ಳಲಿದೆ. ಆದರೆ, ಚುನಾವಣಾ ಆಯುಕ್ತರಾಗಿ ನೇಮಕಗೊಂಡರೆ ಮುಂದಿನ ಆರು ವರ್ಷ ಅಥವಾ 65 ವಯೋಮಿತಿ ಆಗುವವರೆಗೂ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಧಾಕರ್ ರಾವ್ ಅವರ ಪತ್ನಿ ನಿರುಪಮಾ ರಾವ್ ಚೀನಾ ದೇಶದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿವಾದಿತ ಆಯುಕ್ತ ನವೀನ್ ಚಾವ್ಲಾ ಅವರನ್ನು ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ಕುಳ್ಳರಿಸುವುದಾಗಿ ಯುಪಿಎ ಈಗಾಗಲೇ ಘೋಷಣೆ ಮಾಡಿದೆ. ಇದಲ್ಲದೆ, ದಕ್ಷಿಣದಿಂದ ಸುಧಾಕರ್ ರಾವ್ ಅವರನ್ನು ಹೊರತು ಪಡೆಸಿ ಇನ್ನಿಬ್ಬರು ಐಎಎಸ್ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ನವೀನ್ ಚಾವ್ಲಾ ಹಾಗೂ ಡಾ. ಎಸ್ ವೈ ಖುರೇಷಿ ಉತ್ತರ ಮೂಲದವರಾಗಿದ್ದಾರೆ.
(ಏಜೆನ್ಸೀಸ್)
ಪೂರಕ ಓದಿಗೆ:
ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ
ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ: ಆಯೋಗ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications