ಚುನಾವಣಾ ಆಯುಕ್ತರಾಗಿ ಸುಧಾಕರ್ ರಾವ್?
ಬೆಂಗಳೂರು, ಫೆ. 18: ರಾಜ್ಯದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರನ್ನು ಈಗಿನ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಅವರ ಸ್ಥಾನದಲ್ಲಿ ಕೂರಿಸುವ ಸಾಧ್ಯತೆಗಳಿವೆ. ಚಾವ್ಲಾ ಅವರು ಮುಂದಿನ ಮುಖ್ಯ ಚುನಾವಣಾಧಿಕಾರಿಯಾಗುವ ಎಲ್ಲಾ ಲಕ್ಷಣಗಳು ಕಂಡು ಬಂದಿವೆ. ಏಪ್ರಿಲ್ ವೇಳೆಗೆ ಎನ್ ಗೋಪಾಲಸ್ವಾಮಿ ಅವರಿಂದ ತೆರವಾಗುವ ಸ್ಥಾನವನ್ನು ನವೀನ್ ಚಾವ್ಲಾ ಅಲಂಕರಿಸಲಿದ್ದಾರೆ.
ಕರ್ನಾಟಕದ ಮೂಲದವರಾದರೂ ಸುಧಾಕರ್ ರಾವ್ ಅವರು ದೆಹಲಿ ನಿವಾಸಿ. 1973 ರ ಐಎಎಸ್ ತಂಡಕ್ಕೆ ಸೇರಿರುವ ಸುಧಾಕರ್ ರಾವ್ ಅವರ ಅಧಿಕಾರ ಅವಧಿ(ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ) ಸೆಪ್ಟೆಂಬರ್ ಗೆ ಕೊನೆಗೊಳ್ಳಲಿದೆ. ಆದರೆ, ಚುನಾವಣಾ ಆಯುಕ್ತರಾಗಿ ನೇಮಕಗೊಂಡರೆ ಮುಂದಿನ ಆರು ವರ್ಷ ಅಥವಾ 65 ವಯೋಮಿತಿ ಆಗುವವರೆಗೂ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಧಾಕರ್ ರಾವ್ ಅವರ ಪತ್ನಿ ನಿರುಪಮಾ ರಾವ್ ಚೀನಾ ದೇಶದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿವಾದಿತ ಆಯುಕ್ತ ನವೀನ್ ಚಾವ್ಲಾ ಅವರನ್ನು ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ಕುಳ್ಳರಿಸುವುದಾಗಿ ಯುಪಿಎ ಈಗಾಗಲೇ ಘೋಷಣೆ ಮಾಡಿದೆ. ಇದಲ್ಲದೆ, ದಕ್ಷಿಣದಿಂದ ಸುಧಾಕರ್ ರಾವ್ ಅವರನ್ನು ಹೊರತು ಪಡೆಸಿ ಇನ್ನಿಬ್ಬರು ಐಎಎಸ್ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ನವೀನ್ ಚಾವ್ಲಾ ಹಾಗೂ ಡಾ. ಎಸ್ ವೈ ಖುರೇಷಿ ಉತ್ತರ ಮೂಲದವರಾಗಿದ್ದಾರೆ.
(ಏಜೆನ್ಸೀಸ್)
ಪೂರಕ ಓದಿಗೆ:
ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ
ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ: ಆಯೋಗ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications