ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ - ಆಯೋಗ
ನವದೆಹಲಿ ಫೆ 18: ಕಡೆಯ ಹಂತದ ಲೋಕಸಭೆ ಚುನಾವಣೆ ಮುಗಿಯುವವರೆಗೆ ಚುನಾವಣಾಪೂರ್ವ ಅಥವಾ ಮತಗಟ್ಟೆ ಸಮೀಕ್ಷೆ ನಡೆಸಕೂಡದು ಎಂದು ಕೇಂದ್ರ ಚುನಾವಣಾ ಆಯೋಗ ಎಲ್ಲಾ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಈ ಸಂಬಂಧ ಚುನಾವಣಾ ಆಯೋಗದ ಯಾವುದೇ ಮಾರ್ಗಸೂಚಿಗಳಿಗೆ ತಾನು ತಡೆಯಾಜ್ಞೆ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದ ಬೆನ್ನಲ್ಲೇ ಆಯೋಗ ತನ್ನ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಚುನಾವಣಾ ಪೂರ್ವ ಅಥವಾ ಮತಗಟ್ಟೆ ಸಮೀಕ್ಷೆಗಳು ಚುನಾವಣೆ ಮುಗಿದ ನಂತರ ಮತ್ತು ಮತ ಎಣಿಕೆ ಪ್ರಕ್ರಿಯೆಯ ಮುಂಚೆ ಮಾತ್ರ ಪ್ರಕಟಿಸಬಹುದು ಎಂದು ಚುನಾವಣಾ ಆಯೋಗ ಎಲ್ಲಾ ಇಲೆಕ್ಟ್ರಾನಿಕ್, ಮುದ್ರಣ ಹಾಗೂ ವಿವಿಧ ರೀತಿಯ ಮಾಧ್ಯಮಗಳಿಗೆ ಕಟ್ಟುಪಾಡು ವಿಧಿಸಿದೆ.
ಅಯೋಗದ ಅಕ್ರಮಕ್ಕೆ ಪಕ್ಷಗಳಿಂದ ಸ್ವಾಗತ
ಚುನಾವಣಾ ಪೂರ್ವ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ಪ್ರಸಾರದ ಮೇಲೆ ನಿರ್ಬಂಧ ಹೇರಿರುವ ಚುನಾವಣಾ ಆಯೋಗದ ಕ್ರಮಕ್ಕೆ ಪ್ರಮುಖ ರಾಷ್ಟ್ರೀಯ ಪಕ್ಷಗಳು ಸ್ವಾಗತಿಸಿವೆ.ಅಭಿಪ್ರಾಯ ಸಂಗ್ರಹಗಳ ಸಮೀಕ್ಷೆಯಿಂದ ಮತದಾರರಲ್ಲಿ ಗೊಂದಲವುಂಟಾಗಿ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳೇ ಹೆಚ್ಚು . ಆಯೋಗದ ಕ್ರಮ ಸ್ವಾಗತಾರ್ಹ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ವಿವಿಧ ಹಂತಗಳಲ್ಲಿ ಚುನಾವಣೆ ನಡೆಯುವಾಗ, ಮೊದಲ ಹಂತದ ಸಮೀಕ್ಷೆಯ ಮುಂದಿನ ಹಂತದ ಮತದಾನದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಮೀಕ್ಷೆ ಪ್ರಸಾರಕ್ಕೆ ತಡೆ ಹೇರಿರುವುದು ಒಳ್ಳೆಯ ಕ್ರಮ ಎಂದು ಬಿಜೆಪಿಯ ಉಪಾಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಅಭಿಪ್ರಾಯಪಟ್ಟಿದ್ದಾರೆ.
(ಏಜೆನ್ಸೀಸ್)
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications