ನಿವೇಶನ, ಮನೆ ಕಂದಾಯ ಕೂಡಲೇ ಪಾವತಿಸಿ:ಮುಡಾ
ಮೈಸೂರು, ಫೆ. 18: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರು ಮಾಡಲಾಗಿರುವ ನಿವೇಶನಗಳಲ್ಲಿ ಮನೆಗಳನ್ನು ನಿರ್ಮಿಸದೆ ಹಾಗೇ ಖಾಲಿ ನಿವೇಶನಗಳನ್ನು ಹೊಂದಿದವರು ಪ್ರಾಧಿಕಾರವು ಕಾಲಕಾಲಕ್ಕೆ ನಿಗದಿಪಡಿಸಲಾದ ಕಂದಾಯವನ್ನು ಪಾವತಿ ಮಾಡದಿರುವುದು ಕಂಡುಬಂದಿದೆ.
ಇದೇ ರೀತಿ ಪ್ರಾಧಿಕಾರದಿಂದ ಮನೆಗಳನ್ನು ನಿರ್ಮಿಸಿ ಮಂಜೂರಾತಿ ನೀಡಿರುವ ಬಾಬ್ತು ಪ್ರಾಧಿಕಾರದಿಂದ ನಿಗದಿಪಡಿಸಲಾಗಿರುವ ಕಂತಿನ ಮೊಬಲಗನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿರುವುದೂ ಸಹ ಕಂಡಬಂದಿರುತ್ತದೆ. ಹಾಗೂ ಪ್ರಾಧಿಕಾರದಿಂದ ಪಡೆದ ನಿವೇಶನಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವವರು ಮನೆ ಕಂದಾಯ ನಿಗದಿಪಡಿಸಿಕೊಂಡು ಮತ್ತು ಮನೆ ಕಂದಾಯ ನಿಗದಿಪಡಿಸಿಕೊಂಡವರು ಕಂದಾಯವನ್ನೂ ಸಹ ಪ್ರಾಧಿಕಾರಕ್ಕೆ ಪಾವತಿಸದಿರುವುದು ಕಂಡುಬಂದಿದೆ.
ಖಾಸಗಿ ಭೂ ಮಾಲೀಕರು ತಮ್ಮ ಜಮೀನುಗಳಿಗೆ ಭೂ ಪರಿವರ್ತನೆ ಮಾಡಿಸಿಕೊಂಡು ಪ್ರಾಧಿಕಾರದಿಂದ ನಿಯಮಾನುಸಾರ ನಕ್ಷೆ ಅನುಮೋದಿಸಿಕೊಂಡು ನಿವೇಶನಗಳನ್ನು ರಚಿಸಿದ್ದು , ಈ ನಿವೇಶನಗಳ ಖಾತೆ ಕಂದಾಯವನ್ನು ಮಾಡುವ ಅಧಿಕಾರವೂ ಸಹ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುತ್ತದೆ. ಈ ರೀತಿ ಖಾಸಗಿ ಭೂ ಮಾಲೀಕರಿಂದ ನಿವೇಶನಗಳನ್ನು ಪಡೆದವರೂ ಸಹ ನಿವೇಶನ ಕಂದಾಯ ಹಾಗೂ ಈ ನಿವೇಶನಗಳಲ್ಲಿ ಮನೆಗಳನ್ನು ನಿರ್ಮಿಸಿರುವವರು ಮನೆ ಕಂದಾಯವನ್ನು ನಿಗದಿಪಡಿಸಿಕೊಂಡು ಮತ್ತು ಮನೆ ಕಂದಾಯ ನಿಗದಿಪಡಿಸಿಕೊಂಡಿರುವವರು ಕಂದಾಯವನ್ನು ಪ್ರಾಧಿಕಾರಕ್ಕೆ ಪಾವತಿಸದಿರುವುದು ಕಂಡುಬಂದಿರುತ್ತದೆ.
ಪ್ರಾಧಿಕಾರ ಕೈಗೊಳ್ಳುವ ಅಭಿವೃದ್ಧಿ ಕಾರ್ಯಕ್ಕೆ ತೊಡಕು ಉಂಟಾಗುತ್ತದೆ. ನಿಗಧಿತ ಅವಧಿಯೊಳಗೆ ಕಂದಾಯ ಪಾವತಿಸದಿದ್ದಲ್ಲಿ ಬಡ್ಡಿಯನ್ನು ಪಾವತಿಸಬೇಕಾಗಿರುತ್ತದೆ. ಆದ್ದರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾತಿ ಪಡೆದ ಹಾಗೂ ಖಾಸಗಿ ಭೂ ಮಾಲೀಕರಿಂದ ಪಡೆದ ನಿವೇಶನ ಮನೆಗಳು ನಿವೇಶನದಲ್ಲಿ ನಿರ್ಮಿಸಿರುವ ಮನೆಗಳಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ನಿಗದಿಪಡಿಸಿರುವ ಕಂದಾಯವನ್ನು ದಿನಾಂಕ 31.03.2009ರೊಳಗಾಗಿ ಪ್ರಾಧಿಕಾರಕ್ಕೆ ಪಾವತಿಸಬೇಕು.ತಪ್ಪಿದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಅನುಸರಿಸಲಾಗುವುದೆಂದು ತಿಳಿಯುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಾರ್ವಜನಿಕ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
ಮೈಸೂರು ನಗರಾಭಿವೃದ್ಧಿಗೆ ವಿವಿಧ ಯೋಜನೆಗಳು
ಮೈಸೂರು ಜಿಲ್ಲಾ ಪಂಚಾಯತ್ ಬಜೆಟ್ ಮಂಡನೆ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications