ಬಿಜೆಪಿಗೆ ನಿಚ್ಚಳ ಬಹುಮತ: ಸಿಎನ್ ಎನ್ ಐಬಿಎನ್
ಬೆಂಗಳೂರು, ಫೆ. 19 : ಚುನಾವಣೆ ಸಮೀಕ್ಷೆ ನಡೆಸಕೂಡದು ಎನ್ನುವ ಚುನಾವಣಾ ಆಯೋಗದ ಆದೇಶದ ಹೊರತಾಗಿಯೂ ರಾಷ್ಟ್ರೀಯ ಇಂಗ್ಲಿಷ್ ವಾಹಿನಿ ಸಿಎನ್ಎನ್ - ಐಬಿಎನ್ ಬರುವ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ರಾಜ್ಯದಲ್ಲಿ ಬಿಜೆಪಿ ಮತ್ತೆ ತನ್ನ ಪ್ರಾಬಲ್ಯತೆ ಮೆರೆಯಲಿದ್ದು, ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.
ರಸಗೊಬ್ಬರ ಗಲಾಟೆ, ಕೇಸರೀಕರಣ ಆರೋಪ, ಪಬ್ ಗಲಾಟೆ ಮುಂತಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಿರಿಸುವ ಬಿಜೆಪಿ ಬರುವ ಲೋಕಸಭಾ ಚುನಾವಣೆಯಲ್ಲಿ ಶೇಕಡವಾರು ಹೆಚ್ಚು ಮತ ಗಳಿಸಲಿದೆ. ಕಾಂಗ್ರೆಸ್ ಮತ್ತು ಜನತಾದಳ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಹೇಳಿರುವ ವಾಹಿನಿ, ರಾಜ್ಯದ ಒಟ್ಟು 28 ಸ್ಥಾನಗಳ ಪೈಕಿ ಯಾವ ಪಕ್ಷ ಎಷ್ಟು ಸ್ಥಾನ ಪಡೆಯಬಹುದು ಎಂದು ಹೇಳಿಲ್ಲ. ವಾಹಿನಿಯ ಪ್ರಕಾರ ಬಿಜೆಪಿ ಶೇಕಡವಾರು 39, ಕಾಂಗ್ರೆಸ್ 35, ಜನತಾದಳ 15, ಬಿಎಸ್ಪಿ 2 ಹಾಗು ಇತರರು 9 ಮತ ಗಳಿಸಬಹುದು ಎಂದು ಅಭಿಪ್ರಾಯಪಟ್ಟಿದೆ.
ಬಿಜೆಪಿ ಸರ್ಕಾರದ ಜನಪ್ರಿಯತೆ ತೃಪ್ತಿದಾಯಕವಾಗಿದ್ದು, ಉತ್ತಮ ಮುಖ್ಯಮಂತ್ರಿಗಳ ಸಮೀಕ್ಷೆಯಲ್ಲಿ ಈಗಲೂ ಕುಮಾರಸ್ವಾಮಿ ಮುಂದಿದ್ದಾರೆ. ಅವರ ಪರವಾಗಿ ಪ್ರತಿಶತ 72 ಮತ್ತು ಯಡಿಯೂರಪ್ಪ ಪರ ಪ್ರತಿಶತ 64ರಷ್ಟು ಜನ ಒಲವು ತೋರಿಸಿದ್ದಾರೆ ಎಂದು ವಾಹಿನಿ ತನ್ನ ಸಮೀಕ್ಷೆಯಲ್ಲಿ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ - ಆಯೋಗ
ಟಿವಿ ವಾರ್ತೆಯ ಮೇಲೆ ಕಡಿವಾಣ ಇಲ್ಲ: ಕೇಂದ್ರ
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications