ಮುಂದಿನ ಚುನಾವಣೆಯಲ್ಲಿ ನೀವೆಲ್ಲ ಸೋಲುತ್ತೀರ
ನವದೆಹಲಿ ಫೆ 19: ಜನ ಸೇವೆಗೆಂದು ಆಯ್ಕೆಯಾದ ಸಂಸದರು ನೀವು, ಸದನದಲ್ಲಿ ಇದೇ ರೀತಿ ಅನಾಗರೀಕರಂತೆ ವರ್ತಿಸಿ ಕಲಾಪ ಮುಂದೂಡುತ್ತಾ ಬಂದರೆ ಸಾಯುವ ತನಕ ಮುಂದೂಡುತ್ತಲೇ ಬರಬೇಕಾಗುತ್ತದೆ. ಸಾರ್ವಜನಿಕರ ಹಣ ಬಳಸುವ ಒಂದು ಪೈಸಾ ಯೋಗ್ಯತೆ ಕೂಡಾ ನಿಮಗಿಲ್ಲ. ಮುಂದಿನ ಚುನಾವಣೆಯಲ್ಲಿ ನೀವೆಲ್ಲಾ ಸೋತು ಹೋಗಿ ಜವಾಬ್ದಾರಿಯುತ ಸಂಸದರು ಆಯ್ಕೆಯಾಗಬೇಕು ಎಂದು ಗುಡುಗಿದವರು ನಿರ್ಗಮಿಸುತ್ತಿರುವ ಲೋಕಸಭಾ ಸ್ಪೀಕರ್, ಹಿರಿಯ ಮುತ್ಸದ್ದಿ ಸೋಮನಾಥ್ ಚಟರ್ಜಿ.
ಇಂದು ಬೆಳಿಗ್ಗೆ ಕಲಾಪ ಶುರುವಾಗುತ್ತಿದ್ದಂತೆಯೇ ಎನ್ ಡಿ ಎ ಮಿತ್ರಪಕ್ಷಗಳ ಸಂಸದರು ಯುಪಿಎ ಸರಕಾರದ ವೈಫಲ್ಯತೆ ಖಂಡಿಸಿ ಸದನದ ಬಾವಿಯ ಬಳಿ ಆಗಮಿಸಿ ಘೋಷಣೆ ಕೂಗುತ್ತಾ ಪ್ರಶ್ನೋತ್ತರ ವೇಳೆಗೆ ಅಡ್ಡಿಪಡಿಸಿದರು. ಇದರಿಂದ ತಾಳ್ಮೆ ಕಳೆದುಕೊಂಡ ಚಟರ್ಜಿ ಈ ರೀತಿ ಸಂಸದರನ್ನ ತರಾಟೆಗೆ ತೆಗೆದುಕೊಂಡರು.
ಎನ್ ಡಿ ಎ ಮಿತ್ರಪಕ್ಷಗಳಾದ ಬಿ ಎಸ್ ಪಿ , ಬಿಜೆಪಿ, ಟಿಡಿಪಿ, ಆರ್ ಪಿ ಐ , ಪಿಎಂಕೆ ಹಾಗೂ ಎಂಡಿಎಂಕೆ ಪಕ್ಷದ ಸದಸ್ಯರುಗಳು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬಾವಿಯ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲಿ, ಸಂಸದರಿಗೆ ತಾಳ್ಮೆಯಿಂದ ಇರಿ ಎಂದು ಸ್ಪೀಕರ್ ಚಟರ್ಜಿ ಹಲವು ಬಾರಿ ಮನವಿ ಮಾಡಿಕೊಂಡರೂ ಕೇಳದಿದ್ದಾಗ ಅವರು ಮೇಲಿನಂತೆ ಆಕ್ರೋಶ ವ್ಯಕ್ತಪಡಿಸಿದರು.
(ಏಜೆನ್ಸೀಸ್)
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications