ಬಿಎಸ್ ವೈಕಣ್ಣುಗಳಿಗೆ ಸರ್ಜರಿ ಆಗಬೇಕಾಗಿದೆ:ಖರ್ಗೆ
ಬೆಂಗಳೂರು, ಫೆ.20: ''ನಿಮ್ಮ ಎರಡೂ ಕಣ್ಣುಗಳನ್ನು ಆದಷ್ಟು ಬೇಗ ಸರ್ಜನ್ ಬಳಿ ತೋರಿಸಿಕೊಳ್ಳಿ, ಇಲ್ಲವಾದರೆ ನಿಮಗೆ ಅಂಧತ್ವ ಬಂದೀತು, ಜೋಕೆ!'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.
ಖರ್ಗೆ ಪ್ರಕಾರ ಗೃಹ ಸಚಿವ ವಿಎಸ್ ಆಚಾರ್ಯ ಮತ್ತು ವೈದ್ಯಕೀಯ ಸಚಿವ ರಾಮಚಂದ್ರಗೌಡ ಅವರು ಮುಖ್ಯಮಂತ್ರಿಗಳ ಎರಡು ಕಣ್ಣುಗಳಿದ್ದಂತೆ. ಈ ಇಬ್ಬರೂ ಸಚಿವರ ವರ್ತನೆ ಸರಿಯಿಲ್ಲ. ಹೀಗಾಗಿ ಸರ್ಜರಿ ಮಾಡಿಕೊಳ್ಳಿ ಎಂದು ಪರೋಕ್ಷವಾಗಿ ಛೇಡಿಸಿದ್ದಾರೆ. ಈ ಇಬ್ಬರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂಬುದು ಖರ್ಗೆ ಮಾತಿನ ಒಳಾರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಮತ್ತು ಸಚಿವ ರಾಮಚಂದ್ರ ಗೌಡ ವಿನಾ ಕಾರಣ ಕಲಾವಿದರ ಮೇಲೆ ಹರಿಹಾಯ್ದ ಘಟನೆಗಳನ್ನು ಉದ್ದೇಶಿಸಿ ಖರ್ಗೆ ಹೀಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕುರಿತು ಚರ್ಚೆಯಲ್ಲಿ ಪಾಲ್ಗೊಂಡಿದ್ದ ಖರ್ಗೆ, ಈ ಇಬ್ಬರು ಸಚಿವರು ತಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ , ಆದರೂ ಮುಖ್ಯಮಂತ್ರಿಗಳಿಗೆ ಈ ಸಚಿವರೆಂದರೆ ಬಹಳ ಪ್ರೀತಿ. ಗೃಹ ಸಚಿವರು ಸಮಸ್ಯೆ ಹುಟ್ಟುಹಾಕಿ ಮುಖ್ಯಮಂತ್ರಿಗಳನ್ನು ತೊಂದರೆಗೆ ಸಿಲುಕಿಸುತ್ತಿದ್ದಾರೆ ಅದ್ದರಿಂದ ಈ ಎರಡೂ ಕಣ್ಣುಗಳನ್ನು ಸರ್ಜರಿ ಮಾಡಿಸುವುದು ಸೂಕ್ತ ಎಂದು ಖರ್ಗೆ ಮಾರ್ಮಿಕವಾಗಿ ನುಡಿದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ರಾಜ್ಯ ಬಜೆಟ್: ಜನಪ್ರಿಯ ಘೋಷಣೆಗಳ ನಿರೀಕ್ಷೆ
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications