ಟಿವಿ, ವಾಷಿಂಗ್ ಮೆಷಿನ್ ಗೃಹಬಳಕೆ ವಸ್ತುಗಳು ಅಗ್ಗ
ಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ರೀಸಾಮಾನ್ಯನಿಗೆ ಹೆಚ್ಚಿನ ತೆರಿಗೆ ಭಾರ ಹೊರಿಸದೆ ಇಂದು ಮಂಡಿಸಿದ ಬಜೆಟ್ ನಲ್ಲಿ ಹಲವು ರಿಯಾಯಿತಿಗಳನ್ನು ಘೋಷಿಸಿದ್ದಾರೆ. ಶೇ.3ರ ಬಡ್ಡಿದರದಲ್ಲಿ ವಾಣಿಜ್ಯ ಬ್ಯಾಂಕ್ ಗಳಿಂದ ರೈತರು ಸಾಲ ಪಡೆಯುವ ಅವಕಾಶವನ್ನು ಕಲ್ಪಿಸಿದ್ದಾರೆ. ಸರಕಾರಿ ನೌಕರರ ಮನೆ ಬಾಡಿಗೆ, ಭತ್ಯೆಯನ್ನು ಹೆಚ್ಚಿಸಿ ಎಲ್ಲ ವರ್ಗದ ಜನರನ್ನು ಓಲೈಸಲಾಗಿದೆ. ಸಂಪೂರ್ಣ ಕನ್ನಡಮಯವಾದ ಬಜೆಟ್ ಕರಡು ಪತ್ರಿ ಸಿದ್ಧಪಡಿಸಿದ್ದು, ಬಿಜೆಪಿ ಸರ್ಕಾರದ ಕನ್ನಡಪರ ಕಾಳಜಿಗೆ ಸಾಕ್ಷಿಯಾಯಿತು.
ಬಜೆಟ್ ನಲ್ಲಿ ರಿಯಾಯಿತಿ
ರು.100 ಮತ್ತು ಅದಕ್ಕಿಂತಲೂ ಕಡಿಮೆ ಬೆಲೆಯ ಪಾದರಕ್ಷೆಗಳ ಮೇಲಿನ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಟಿವಿ, ವಾಷಿಂಗ್ ಮೆಷಿನ್, ಗೃಹ ಬಳಕೆ ವಸ್ತುಗಳ ಮೇಲೆ ಶೇ.4 ರ ತೆರಿಗೆ ರಿಯಾಯಿತಿ ನೀಡಲಾಗಿದೆ. ವೃತ್ತಿ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ ವೇತನ ರು.5000 ದಿಂದ ರು.10,000 ಕ್ಕೆ ಏರಿಸಲಾಗಿದೆ. ಖಾಸಗಿ ಶಾಲೆಗಳಿಗೆ, ಕಾಲೇಜುಗಳಿಗೆ ವೃತ್ತಿ ತೆರಿಗೆ ವಿನಾಯಿತಿ ನೀಡಲಾಗಿದೆ.
ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆ ಹೆಚ್ಚಳ
'ಎ 'ಶ್ರೇಣಿ ನಗರದಲ್ಲಿ ವಾಸ ಮಾಡುವ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆಯನ್ನು ಶೇ.20 ಹೆಚ್ಚಿಸಿದರೆ, ಬಿ ವರ್ಗದ ನಗರಗಳಿಗೆ ಶೇ.15, ಸಿ, ಡಿ ಮತ್ತು ಇ ವರ್ಗದ ನಗರಗಳಿಗೆ ಕ್ರಮವಾಗಿ ಶೇ.9.6 ಮತ್ತು ಶೇ. 5ರ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಇದಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಕಳೆದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರಿಗೆ ಸೌಲಭ್ಯ ನೀಡಲಾಗಿದೆ.
ಪತ್ರಕರ್ತರ ವರಮಾನ ಮಿತಿ ಹೆಚ್ಚಳ
ನಿವೃತ್ತ ಪತ್ರಕರ್ತರು ಮಾಸಾಶನ ಪಡೆಯಲು ಇರುವ ವಾರ್ಷಿಕ ವರಮಾನ ಮಿತಿಯನ್ನು ರು.5,000 ದಿಂದ ರು. 50,000ಕ್ಕೆ ಹೆಚ್ಚಿಸಲಾಗಿದೆ. ಯಡಿಯೂರಪ್ಪನವರು ತಮ್ಮ ಬಜೆಟ್ ನಲ್ಲಿ ಪತ್ರಕರ್ತರಿಗೆ ವಿಶೇಷ ಆದ್ಯತೆ ನೀಡಿದ್ದಾರೆ. ರಾಜ್ಯದ ಎಲ್ಲಾ ಕೇಂದ್ರಗಳಿಗೆ ಸುಸಜ್ಜಿತ ಪತ್ರಿಕಾ ಭವನ, ಮಾಧ್ಯಮ ಕೇಂದ್ರ ನಿರ್ಮಾಣಕ್ಕೆ ತಲಾ ರು. 25 ಲಕ್ಷ ಅನುದಾನ, ಯಶಸ್ವಿನಿ ಸಹಕಾರ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ಕಾರ್ಯನಿರತ ಪತ್ರಕರ್ತರು ಹಾಗೂ ನಿವೃತ್ತ ಪತ್ರಕರ್ತರನ್ನು ಒಳಪಡಿಸುವುದು. ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಸೇರಿದಂತೆ ಹಲವಾರು ಕೊಡುಗೆಗಳನ್ನು ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಮುದ್ರಾಂಕ ಮತ್ತು ನೋಂದಣಿ ಶುಲ್ಕ ಇಳಿಕೆ
ಕೃಷಿ ಭೂಮಿ ಸೇರಿದಂತೆ ಎಲ್ಲ ಬಗೆಯ ಸ್ಥಿರಾಸ್ತಿಗಳ ಮಾರಾಟ ಮತ್ತಿತರ ವರ್ಗಾವಣೆಗಳ ಶುಲ್ಕವನ್ನು ಶೇ. 7.5 ರಿಂದ ಶೇ. 6 ಕ್ಕೆ ಇಳಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ: ಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications