ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಗೆ ಕಾಂಗ್ರೆಸ್ ಪ್ರತಿಪಕ್ಷದ ಗದ್ದುಗೆ?

By Staff
|
Google Oneindia Kannada News

ನವದೆಹಲಿ, ಫೆ.20: ಕೆಲವೊಂದು ನಾಟಕೀಯ ಬೆಳವಣಿಗೆಗಳಿಗೆ ಕಾಂಗ್ರೆಸ್ ಪಕ್ಷ ವೇದಿಕೆಯಾಗಿದ್ದು, ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪ್ರತಿಪಕ್ಷ ಹುದ್ದೆಗೆ ಪಟ್ಟಾಭಿಷೇಕ ಮಾಡಲು ಹೈಕಮಾಂಡ್ ತಯಾರಿ ನಡೆಸಿದೆ.

ಮತ್ತೊಂದು ಗಮನಾರ್ಹ ಬೆಳವಣಿಗೆಯಲ್ಲಿ ಪೃಥ್ವಿರಾಜ್ ಚೌಹಾಣ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ತೆರವುಗೊಳಿಸಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ನೀಡಲಾಗಿದೆ. ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಮತ್ತು ಒರಿಸ್ಸ್ಸಾ ಪಕ್ಷದ ವ್ಯವಹಾರಗಳನ್ನು ಆಜಾದ್ ಹೆಗಲಿಗೆ ಹೊರಿಸಲಾಗಿದೆ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ವರಿಷ್ಠ ಬಿ.ಕೆ.ಹರಿಪ್ರಸಾದ್ ಅವರಿಗೆ ಗುಜರಾತ್ ಜತೆಗೆ ಮಧ್ಯಪ್ರದೇಶದ ಪಕ್ಷ ಉಸ್ತುವಾರಿ ವಹಿಸಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷಾಧ್ಯಕ್ಷೆ ಸೋನಿಯಾಗಾಂಧಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ. ಹಾಗೆಯೇ ಜನಾರ್ದನ ಪೂಜಾರಿ ಅವರನ್ನು ಮಧ್ಯಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ ಮತ್ತು ಗೋವಾದ ಆಯ್ಕೆ ಸಮಿತಿ ಜವಾಬ್ದಾರಿಯನ್ನು ವಹಿಸಲಾಗಿದೆ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X