ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆಗೆ ಜೆಎಕೆ ಸ್ವಾಗತ
ಬೆಂಗಳೂರು, ಫೆ. 21 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮಂಡಿಸಿದ 2009-10ನೇ ಸಾಲಿನ ರಾಜ್ಯ ಆಯವ್ಯಯ ಪತ್ರದಲ್ಲಿ ಪರ್ತಕರ್ತರ ಕ್ಷೇಮಾಭಿವೃದ್ಧಿಗೆ ಘೋಷಿಸಿರುವ ಹಲವಾರು ಯೋಜನೆಗಳನ್ನು ಜರ್ನಲಿಸ್ಟ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ (ಜೆಎಕೆ) ಸ್ವಾಗತಿಸುತ್ತದೆ ಎಂದು ಜೆಎಕೆ ಅಧ್ಯಕ್ಷ ಬಿ. ಹರೀಶ್ಚಂದ್ರ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜೆಎಕೆ ಪದಾಧಿಕಾರಿಗಳು ಇತ್ತೀಚೆಗಷ್ಟೇ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಭೃಂಗೀಶ್, ಮಾಧ್ಯಮ ಸಲಹೆಗಾರ ಆರ್.ಪಿ.ಜಗದೀಶ್ ಅವರನ್ನು ಭೇಟಿ ಮಾಡಿ ಪತ್ರಕರ್ತರ ಪರವಾಗಿ ಕೆಲವು ಬೇಡಿಕೆಗಳನ್ನಿಟ್ಟಿದ್ದಾರೆ. ಜೆಎಕೆ ಮುಂದಿಟ್ಟ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಭಟ್ ಹೇಳಿದ್ದಾರೆ.
ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಶೀನಿವಾಸ ಮೂರ್ತಿ ಅವರಿಗೂ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ವಿ.ಪಿ.ಬಳಿಗಾರ್ ಅವರಿಗೂ, ಮಾಧ್ಯಮ ಸಲಹೆಗಾರ ಆರ್.ಪಿ.ಜಗದೀಶ್ ಮತ್ತು ಭೃಂಗೀಶ್ ಅವರಿಗೂ ಜೆಎಕೆ ಕೃತಜ್ಞತೆ ಸಲ್ಲಿಸುತ್ತದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications