ರೇಣುಕಾ ಚೌಧರಿ ವಿರುದ್ಧ ಎಫ್ ಐಆರ್ ದಾಖಲು
ಮಂಗಳೂರು, ಫೆ.21: ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ರೇಣುಕಾ ಚೌಧುರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 'ಮಂಗಳೂರು ತಾಲೀಬಾನೀಕರಣವಾಗುತ್ತಿದೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿತ್ತು.
ಸಚಿವರ ವಿವಾದಾತ್ಮಕ ಹೇಳಿಕೆ ವಿರುದ್ಧ ಮಂಗಳೂರು ಮೇಯರ್ ಗಣೇಶ್ ಹೊಸಬೆಟ್ಟು ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು.ಸಚಿವೆ ಚೌಧುರಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು, ಎಫ್ಐಆರ್ ಪ್ರತಿಯನ್ನು 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಮೊಕದ್ದಮೆ ಅರ್ಜಿಯ ವಿಚಾರಣೆ ನಡೆಸಿದ್ದ ನಗರದ 3ನೇ ಜೆಎಂಎಫ್ಸಿ ನ್ಯಾಯಾಲಯ, ಶೀಘ್ರವೇ ಚೌಧುರಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಗ್ರಾಮಾಂತರ ಠಾಣೆ ಪೊಲೀಸರಿಗೆ ಸೂಚನೆ ನೀಡಿತ್ತು. ಆದರೆ ನ್ಯಾಯಾಲಯದ ಆದೇಶದ ಬಳಿಕ ಚೌಧುರಿ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರು ಹಿಂಜರಿಯುತ್ತಿದ್ದರು ಎಂಬ ವರದಿಗಳು ಬಂದಿದ್ದವು.
ಮಂಗಳೂರು ನಗರದ ಅಮ್ನೇಶಿಯಾ ದಿಲಂಜ್ ಎಂಬ ಪಬ್ ಮೇಲೆ ದಾಳಿ ನಡೆಸಿ, ದಾಂಧಲೆ ಎಸಗಿದ ಆರೋಪದಲ್ಲಿ ಶ್ರೀರಾಮಸೇನೆಯ ಸಹಸಂಚಾಲಕ ಸೇರಿ ಹದಿಮೂರು ಮಂದಿಯನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದರು. ಸೇನೆಯ ಸಹಸಂಚಾಲಕ ಸುಭಾಷ್ ಪಡೀಲ್, ಶರತ್ ಪದವಿನಂಗಡಿ, ದಿನೇಶ್, ಹರೀಶ್, ಕೀರ್ತನರಾಜ್ ಶೆಟ್ಟಿ, ರಾಘವೇಂದ್ರ ಪೈ, ಜೀವನ್, ವಿನೋದ್ ಮತ್ತು ಪ್ರೀತೇಶ್ ಎಂಬುವವರನ್ನು ಬಂಧಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ
ಹುಡುಗಿಯರ ಥಳಿಸಿದ ರಾಮಸೇನಾ ಕಾರ್ಯಕರ್ತರು












Click it and Unblock the Notifications