ನೈಸ್ ಅವ್ಯವಹಾರ: ಲೋಕಾಯುಕ್ತ ತನಿಖೆಗೆ ತಡೆ
ನವದೆಹಲಿ, ಫೆ.21: ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ(ಬಿಎಂಐಸಿ) ಯೋಜನೆ ಅವ್ಯವಹಾರಗಳ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಭ್ರಷ್ಟಾಚಾರ ಆರೋಪ ಹೊಂದಿರುವ ಪತ್ರವನ್ನು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮಾಜಿ ಪ್ರಧಾನಿ ದೇವೇಗೌಡರು ಇತ್ತೀಚೆಗೆ ಬರೆದಿದ್ದರು. ಆ ಪತ್ರವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಿ ಭ್ರಷ್ಟಾಚಾರ ತನಿಖೆ ನಡೆಸುವಂತೆ ರಾಜ್ಯ ಹೈಕೋರ್ಟ್ ಆದೇಶ ನೀಡಿತ್ತು. ಆ ಆದೇಶವನ್ನು ರದ್ದುಗೊಳಿಸಬೇಕು ಎಂದು ನೈಸ್ ಸಂಸ್ಥೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.
ನ್ಯಾಯಮೂರ್ತಿ ಡಿ.ಕೆ.ಜೈನ್ ಅವರಿದ್ದ ನ್ಯಾಯಪೀಠವು ಕರ್ನಾಟಕ ಸರ್ಕಾರ ಮತ್ತು ದೇವೇಗೌಡರಿಗೆ ನೋಟೀಸ್ ನೀಡಿ ಆರು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.
(ಏಜೆನ್ಸೀಸ್)












Click it and Unblock the Notifications