ಬೆಳಗಾವಿ ವಿವಾದ, ಮಹಾರಾಷ್ಟ್ರ ನಿಯೋಗಕ್ಕೆ ಛೀಮಾರಿ
ಬೆಳಗಾವಿ, ಫೆ. 23 : ಬೆಳಗಾವಿ ಗಡಿ ವಿವಾದ ಸಂಬಂಧ ಉನ್ನತ ನಿಯೋಗವನ್ನು ಕರೆದುಕೊಂಡು ದಿಲ್ಲಿಗೆ ತೆರಳಿದ್ದ ಮಹಾರಾಷ್ಟ್ರ ನಿಯೋಗಕ್ಕೆ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ತಮ್ಮ ಅನುಭವದ ಮಾತಿನಿಂದಲೇ ಕಪಾಳಮೋಕ್ಷ ಮಾಡಿ ನಿಯೋಗದ ನಾಯಕರಿಗೆ ಕಹಿ ಅನುಭವ ನೀಡಿದ್ದಾರೆ.
ಕರ್ನಾಟಕದಲ್ಲಿ ಮರಾಠಿ ಭಾಷಿಗರ ಮೇಲೆ ಅಲ್ಲಿನ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎ೦ದು ಘೋಷಿಸಬೇಕು ಎನ್ನುವ ಬೇಡಿಕೆಯೊಂದಿಗೆ ತೆರಳಿದ್ದ ನಿಯೋಗ, ಗೃಹ ಸಚಿವರಿಗೆ ಮನವಿ ಸಲ್ಲಿಸಿತ್ತು. ಮನವಿಗೆ ಸ್ಪಂದಿಸದ ಚಿದಂಬರಂ, ನೀವು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಬೇಡಿಕೆಯಿಟ್ಟರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಧರಮ್ ಸಿಂಗ್ ಬೆಳಗಾವಿಯನ್ನು ಚಳಿಗಾಲದ ರಾಜಧಾನಿಯನ್ನಾಗಿ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.
ಇತ್ತೀಚೆಗಷ್ಟೇ ಅಲ್ಲಿ ರಾಜ್ಯ ಅಧಿವೇಶನ ಬೇರೆ ನಡೆದಿದೆ. ಭಾರತ ಒಂದೇ ದೇಶ, ಕರ್ನಾಟಕ ಶತ್ರು ರಾಜ್ಯವಲ್ಲ, ಬೆಳಗಾವಿ ಕರ್ನಾಟಕದ ಒಂದು ಅವಿಭಾಜ್ಯ ಅಂಗ ಎ೦ದು ದಬಾಯಿಸಿ ವಾಪಸ್ಸು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ನಿಯೋಗದಲ್ಲಿ ಮುಖ್ಯಮಂತ್ರಿ ಅಶೋಕ್ ಚವಾಣ್, ಉಪಮುಖ್ಯಮಂತ್ರಿ ಛಗನ್ ಭುಜಬಲ್, ವಿರೋಧ ಪಕ್ಷದ ನಾಯಕ ರಾಮದಾಸ್ ಕದಂ ಮುಂತಾದವರಿದ್ದರು. ಗೃಹ ಸಚಿವರ ತಿರುಗೇಟು ಇನ್ನು ಮುಂದೆ ಮಹಾರಾಷ್ಟ್ರ, ಬೆಳಗಾವಿ ಗಡಿವಿವಾದದ ವಿಷಯದಲ್ಲಿ ಆತ್ಮಾವಲೋಕನ ಮಾಡಿಕೊಳ್ಳುವ೦ತಾಗಿದ್ದು ಮಾತ್ರ ಸತ್ಯ.
(ದಟ್ಸ್ ಕನ್ನಡ ವಾರ್ತೆ)
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ












Click it and Unblock the Notifications