ಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು

ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರು ರೆಹಮಾನ್ ಅವರ ಸಾಧನೆಯನ್ನು ಕೊಂಡಾಡಿರುವುದಲ್ಲದೆ, ಆಸ್ಕರ್ ಪ್ರಶಸ್ತಿಯ ಮೇಲಿನ ತೆರಿಗೆ ಸುಂಕದ ವಿನಾಯಿತಿ ನೀಡಬೇಕು ಎಂದು ಅವರು ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ದೇಶವೇ ಬೆರಗಾಗುವಂತ ಸಾಧನೆ ಮಾಡಿದ ಅಸಾಮಾನ್ಯ ಸಾಧಕನಿಗೆ ಸರ್ಕಾರ ಈ ಮೂಲಕ ಚಿಕ್ಕ ಗೌರವ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಅವರು ಹೇಳಿದ್ದಾರೆ.
ನವದೆಹಲಿಯ ಕೇಂದ್ರದ ತೆರಿಗೆ ಮತ್ತು ಸುಂಕ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೆಹಮಾನ್ ಅವರನ್ನು ಮುಕ್ತ ಕಂಠದಿಂದ ಕೊಂಡಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ, ಕೇಂದ್ರ ತೆರಿಗೆ ಇಲಾಖೆ ಹಿರಿಯ ಅಧಿಕಾರಿ ಎಸ್ಎಸ್ ಎನ್ ಮೂರ್ತಿ ಉಪಸ್ಥಿತರಿದ್ದರು. ತೆರಿಗೆ ವಿನಾಯಿತಿಗೆ ಸಂಬಂಧಿಸಿದಂತೆ ಮೂರ್ತಿ ಪ್ರತಿಕ್ರಿಯಿಸಲು ನಿರಾಕರಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications