ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ, ಶೋಭಾ
ಬೆಂಗಳೂರು, ಫೆ. 23 : ಮನೆ ಮನೆಗೆ ತೆರಳಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ-ಸವಲತ್ತುಗಳ ಲಾಭವನ್ನು ಅವರಿಗೆ ದೊರಕಿಸಿ ಕೊಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಸೂಲಿಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1.55 ಕೋಟಿ ರೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಎಲ್ಲಾ ಯೋಜನೆಗಳ ಪ್ರಯೋಜನವೂ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು ಎಂಬುದು ರಾಜ್ಯ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಅರ್ಹರ ಅನ್ವೇಷಣೆ ಅತ್ಯಾವಶ್ಯಕ ಎಂದ ಅವರು, ಸರ್ಕಾರದ ಎಲ್ಲಾ ಕಾರ್ಯಚಟುವಟಿಕೆಗಳಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜನೋಪಯೋಗಿ ಕಾರ್ಯಗಳಿಗೆ ಸರ್ಕಾರಿ ಜಮೀನು ಮೀಸಲಿರಿಸಿ :
ಗೃಹ ನಿರ್ಮಾಣ, ಕೈಗಾರಿಕೆಗಳ ಸ್ಥಾಪನೆ ಮತ್ತಿತರ ಚಟುವಟಿಕೆಗಳಿಗೆ ಈ ಹಿಂದೆ ಸರ್ಕಾರಿ ಜಮೀನುಗಳನ್ನು ಖಾಸಗಿಯವರಿಗೆ ಅವ್ಯಾಹತವಾಗಿ ಮಾರಾಟ ಮಾಡಲಾಗಿದೆ. ಇದರಿಂದ ಆಸ್ಪತ್ರೆಗಳ ಸ್ಥಾಪನೆ, ಶಾಲಾ-ಕಾಲೇಜುಗಳ ಕಟ್ಟಡಗಳ ನಿರ್ಮಾಣದಂತಹ ಜನಪರ ಕಾರ್ಯಗಳಿಗೆ ಸರ್ಕಾರವೇ ಜಮೀನು ಖರೀದಿಸಲು ಪರದಾಡುವಂತಾಗಿದೆ ಎಂದ ಸಚಿವರು, ಸರ್ಕಾರಿ ಜಮೀನುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಬೇಡಿ. ಸರ್ಕಾರಿ ಜಮೀನುಗಳನ್ನು ಸರ್ಕಾರದ ಜನೋಪಯೋಗಿ ಕಾರ್ಯಗಳಿಗೆ ಮೀಸಲಿರಿಸಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ತಾವು ಪ್ರತಿನಿಧಿಸುತ್ತಿರುವ ಯಶವಂತಪುರ ವಿಧಾನಸಭಾ ಕ್ಷೇತ್ರ ರಾಜ್ಯದ ರಾಜಧಾನಿಗೆ ಹೊಂದಿಕೊಂಡಿದ್ದರೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದು ಕಳವಳದ ಸಂಗತಿ ಎಂದ ಶೋಭಾ ಕರಂದ್ಲಾಜೆ ಅವರು, ಸಮಸ್ಯೆಗಳ ಸಾಗರದಲ್ಲಿ ಮುಳುಗಿರುವ ಈ ಕ್ಷೇತ್ರವನ್ನು ಇನ್ನು ಮೂರು ವರ್ಷಗಳೊಳಗೆ ಸಕಲ ಸೌಲಭ್ಯಗಳಿರುವ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಪಣತೊಟ್ಟಿರುವುದಾಗಿ ಪ್ರಕಟಿಸಿದರು.
ಸೂಲಿಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಚಿಕ್ಕಬಸ್ತಿಯಿಂದ ರಾಮಸಂದ್ರದವರೆಗೆ, ರಾಮಸಂದ್ರದಿಂದ ಕೆಂಚನಪುರ ಅಡ್ಡರಸ್ತೆಯವರೆಗೆ ಹಾಗೂ ರಾಮಸಂದ್ರದಿಂದ ಧನನಾಯಕನಹಳ್ಳಿ ಮಾರ್ಗವಾಗಿ ದೊಡ್ಡ ಬಸ್ತಿಯವರೆಗೆ ತಲಾ 35 ಲಕ್ಷ ರೂ ವೆಚ್ಚದಲ್ಲಿ ತಲಾ ಎರಡು ಕಿ. ಮೀ ರಸ್ತೆ ಅಭಿವೃದ್ಧಿ ಮತ್ತು ನಿರ್ಮಾಣವೂ ಸೇರಿದಂತೆ ಒಟ್ಟಾರೆ 1.55 ಕೋಟಿ ರೂ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications