ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ, ಶೋಭಾ
ಬೆಂಗಳೂರು, ಫೆ. 23 : ಮನೆ ಮನೆಗೆ ತೆರಳಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ-ಸವಲತ್ತುಗಳ ಲಾಭವನ್ನು ಅವರಿಗೆ ದೊರಕಿಸಿ ಕೊಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಸೂಲಿಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1.55 ಕೋಟಿ ರೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಎಲ್ಲಾ ಯೋಜನೆಗಳ ಪ್ರಯೋಜನವೂ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು ಎಂಬುದು ರಾಜ್ಯ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಅರ್ಹರ ಅನ್ವೇಷಣೆ ಅತ್ಯಾವಶ್ಯಕ ಎಂದ ಅವರು, ಸರ್ಕಾರದ ಎಲ್ಲಾ ಕಾರ್ಯಚಟುವಟಿಕೆಗಳಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜನೋಪಯೋಗಿ ಕಾರ್ಯಗಳಿಗೆ ಸರ್ಕಾರಿ ಜಮೀನು ಮೀಸಲಿರಿಸಿ :
ಗೃಹ ನಿರ್ಮಾಣ, ಕೈಗಾರಿಕೆಗಳ ಸ್ಥಾಪನೆ ಮತ್ತಿತರ ಚಟುವಟಿಕೆಗಳಿಗೆ ಈ ಹಿಂದೆ ಸರ್ಕಾರಿ ಜಮೀನುಗಳನ್ನು ಖಾಸಗಿಯವರಿಗೆ ಅವ್ಯಾಹತವಾಗಿ ಮಾರಾಟ ಮಾಡಲಾಗಿದೆ. ಇದರಿಂದ ಆಸ್ಪತ್ರೆಗಳ ಸ್ಥಾಪನೆ, ಶಾಲಾ-ಕಾಲೇಜುಗಳ ಕಟ್ಟಡಗಳ ನಿರ್ಮಾಣದಂತಹ ಜನಪರ ಕಾರ್ಯಗಳಿಗೆ ಸರ್ಕಾರವೇ ಜಮೀನು ಖರೀದಿಸಲು ಪರದಾಡುವಂತಾಗಿದೆ ಎಂದ ಸಚಿವರು, ಸರ್ಕಾರಿ ಜಮೀನುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಬೇಡಿ. ಸರ್ಕಾರಿ ಜಮೀನುಗಳನ್ನು ಸರ್ಕಾರದ ಜನೋಪಯೋಗಿ ಕಾರ್ಯಗಳಿಗೆ ಮೀಸಲಿರಿಸಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ತಾವು ಪ್ರತಿನಿಧಿಸುತ್ತಿರುವ ಯಶವಂತಪುರ ವಿಧಾನಸಭಾ ಕ್ಷೇತ್ರ ರಾಜ್ಯದ ರಾಜಧಾನಿಗೆ ಹೊಂದಿಕೊಂಡಿದ್ದರೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದು ಕಳವಳದ ಸಂಗತಿ ಎಂದ ಶೋಭಾ ಕರಂದ್ಲಾಜೆ ಅವರು, ಸಮಸ್ಯೆಗಳ ಸಾಗರದಲ್ಲಿ ಮುಳುಗಿರುವ ಈ ಕ್ಷೇತ್ರವನ್ನು ಇನ್ನು ಮೂರು ವರ್ಷಗಳೊಳಗೆ ಸಕಲ ಸೌಲಭ್ಯಗಳಿರುವ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಪಣತೊಟ್ಟಿರುವುದಾಗಿ ಪ್ರಕಟಿಸಿದರು.
ಸೂಲಿಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಚಿಕ್ಕಬಸ್ತಿಯಿಂದ ರಾಮಸಂದ್ರದವರೆಗೆ, ರಾಮಸಂದ್ರದಿಂದ ಕೆಂಚನಪುರ ಅಡ್ಡರಸ್ತೆಯವರೆಗೆ ಹಾಗೂ ರಾಮಸಂದ್ರದಿಂದ ಧನನಾಯಕನಹಳ್ಳಿ ಮಾರ್ಗವಾಗಿ ದೊಡ್ಡ ಬಸ್ತಿಯವರೆಗೆ ತಲಾ 35 ಲಕ್ಷ ರೂ ವೆಚ್ಚದಲ್ಲಿ ತಲಾ ಎರಡು ಕಿ. ಮೀ ರಸ್ತೆ ಅಭಿವೃದ್ಧಿ ಮತ್ತು ನಿರ್ಮಾಣವೂ ಸೇರಿದಂತೆ ಒಟ್ಟಾರೆ 1.55 ಕೋಟಿ ರೂ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications