ದಯವಿಟ್ಟು ಡಾ ಯಡಿಯೂರಪ್ಪ ಅನ್ನಬೇಡಿ ಎಂದ ಸಿಎಂ
ಬೆಂಗಳೂರು, ಫೆ. 24 : ಅಮೆರಿಕದ ಮಿಚಿಗನ್ ನ ಸಗಿನಾವ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದುಕೊಂಡಿರುವ ಯಡಿಯೂರಪ್ಪ ಅವರು ಡಾ. ಬಿಎಸ್ ಯಡಿಯೂರಪ್ಪ ಆಗಿರುವುದು ಹಳೆಯ ಸುದ್ದಿ. ಆದರೆ, ಇದೀಗ ಯಡಿಯೂರಪ್ಪ ತಮ್ಮನ್ನು ಡಾ. ಯಡಿಯೂರಪ್ಪ ಎಂದು ಕರೆಯಬೇಡಿ, ಸಾಮಾನ್ಯ ರೈತರ ಮಗನಾಗಿರುವ ನಾನು, ರೈತರ ಮನನಾಗಿಯೇ ಇರಲು ಇಚ್ಛೆಪಡುತ್ತೇನೆ. ರೈತನ ಮಗ ಯಡಿಯೂರಪ್ಪ ಎಂದು ಕರೆದರೆ ಸಂತೋಷವಾಗಲಿದೆ ಎಂದು ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ನಿಮಗೆ ನೆನಪಿರಬಹುದು, ಸಗಿನಾವ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಂಭ್ರಮ ಮನೆಮಾಡಿತ್ತು. ಕಾರ್ಯಕರ್ತರು ಈ ಸಂಭ್ರಮವನ್ನು ಹಬ್ಬದಂತೆ ಆಚರಿಸಿದ ಉದಾಹರಣೆಯೂ ಇದೆ. ಇನ್ನು ಪದವಿ ಪಡೆದುಕೊಳ್ಳಲು ಯಡಿಯೂರಪ್ಪ ಸೇರಿ ಸಂಪುಟ ಅರ್ಧ ಡಜನ್ ಸಚಿವರು ಅಮೆರಿಕಕ್ಕೆ ತೆರಳಿದ್ದು ಗೊತ್ತಿರುವ ಸಂಗತಿ. ಯಾವ ಸಾಧನೆಗೆ ಮುಖ್ಯಮಂತ್ರಿಯವರು ಡಾಕ್ಟರೇಟ್ ಪಡೆದುಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕರು ಟೀಕೆ ಟಿಪ್ಪಣಿ ಮಾಡಿದರೂ, ಯಾವುದನ್ನೂ ಲೆಕ್ಕಿಸದ ಯಡಿಯೂರಪ್ಪ ಪದವಿ ಪಡೆದುಕೊಂಡು ಡಾ. ಯಡಿಯೂರಪ್ಪ ಆಗಿದ್ದರು.
ಆದರೆ, ಶಿವರಾತ್ರಿ ದಿನದಂದು ಯಾವುದಾದರೊಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರತಿಜ್ಞೆ ಮಾಡಿರುವ ಮುಖ್ಯಮಂತ್ರಿ ಡಾ ಯಡಿಯೂರಪ್ಪ ಅವರು, ಬರೀ ಯಡಿಯೂರಪ್ಪ ಎಂದು ಕರೆಸಿಕೊಳ್ಳಲು ನಿರ್ಧರಿಸಿದ್ದಾರೆ. ಗೋಕರ್ಣದ ರಾಮಚಂದ್ರಾಪುರದ ಶ್ರೀ ರಾಘವೇಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೆ, ಸಭೆ, ಸಮಾರಂಭಗಳಲ್ಲಿ ಹಾರ-ತುರಾಯಿ ಹಾಕಿಸಿಕೊಳ್ಳದಿರಲು ಕೂಡ ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಡಾಕ್ಟರೇಟ್ ಪಡೆಯಲು ನನಗಿಂತ ಅರ್ಹರು ಬೇಕಾದಷ್ಟು ಜನ ಇದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಮಗನಾಗಿರುವ ನಾನು, ರೈತನ ಮಗ ಯಡಿಯೂರಪ್ಪ ಎಂದು ಕರೆಸಿಕೊಳ್ಳಲು ಇಚ್ಛೆಪಡುತ್ತೇನೆ. ಈ ಬಗ್ಗೆ ಶೀಘ್ರದಲ್ಲಿ ಸರ್ಕಾರಿ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ : ಆಲದ ಹೂವು ಹೂವಲ್ಲ, ಗೌರವ ಡಾಕ್ಟರೇಟ್ ಪದವಿಯಲ್ಲ!
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications