ಸದನದಲ್ಲಿ ಸಂಪಂಗಿ ಪುರಾಣ ಪ್ರತಿಧ್ವನಿ
ಬೆಂಗಳೂರು, ಫೆ. 24 : ಕೆಜಿಎಫ್ ಶಾಸಕ ಸಂಪಂಗಿ ಲಂಚ ಪ್ರಕರಣ ಹಾಗೂ ಪ್ರತಿಪಕ್ಷಗಳ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಸರ್ಕಾರ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷ ಸರ್ಕಾರದ ನೀತಿಯನ್ನು ಖಂಡಿಸಿ ಬಾವಿಗಿಳಿದು ಧರಣಿ ನಡೆಸಿ ನಂತರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಸಭಾತ್ಯಾಗ ಮಾಡಿದ ಘಟನೆ ಮಂಗಳವಾರ ವಿಧಾನಸಭೆಯಲ್ಲಿ ನಡೆಯಿತು.
ಇಂದು ಬೆಳಗ್ಗೆ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆಯೇ ವಾಗ್ದಾಳಿ ಆರಂಭಿಸಿದ ಕಾಂಗ್ರೆಸ್ ಪಕ್ಷ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪ್ರತಿಪಕ್ಷದ ಶಾಸಕರಿಗೆ ಸಂಬಂಧಿಸಿದ ಕ್ಷೇತ್ರದ ಅನುದಾನ ನೀಡುವಲ್ಲಿ ವಿಳಂಬ ಮಾಡತೊಡಗಿದೆ. ಸರ್ಕಾರದ ಈ ತಾರತಮ್ಯ ನೀತಿಯಿಂದಾಗಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ. ಬಿಜೆಪಿ ಶಾಸಕ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಾಂತರ ರುಪಾಯಿಗಳನ್ನು ಬಿಡುಗಡೆ ಮಾಡಿ ಅನ್ಯ ಪಕ್ಷಗಳ ಶಾಸಕರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಮೀನಾಮೇಷ ಎಣಿಸುವುದು ಏಕೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಉದ್ದೇಶಪೂರ್ವಕವಾಗಿ ಪ್ರತಿಪಕ್ಷಗಳ ಶಾಸಕರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಅನುಸರಿಸತೊಡಗಿದೆ ಎಂದು ಆರೋಪಿಸಿದ ಅವರು, ಲೋಕಸಭೆ ಚುನಾವಣೆ ಹತ್ತಿರ ಇರುವುದರಿಂದ ಸರ್ಕಾರ ಇದನ್ನು ಉದ್ದೇಶಪೂರ್ವಕವಾಗಿ ಮಾಡತೊಡಗಿದೆ ಎಂದರು. ಖರ್ಗೆ ಮಾತಿಗೆ ಧ್ವನಿಗೂಡಿಸಿದ ದೇವರ ಹಿಪ್ಪರಗಿ ಶಾಸಕ ಎ ಎಸ್ ಪಾಟೀಲ್, ದೇವರಹಿಪ್ಪರಗಿ ಕ್ಷೇತ್ರದಲ್ಲಿ ರಸ್ತೆ ಸ್ಥಿತಿ ಗಂಭೀರವಾಗಿದೆ. ಸರಿಯಾಗಿ ನಡೆದಾಡಿಕೊಂಡು ಹೋಗುವ ಸ್ಥಿತಿಯಲ್ಲೂ ಅಲ್ಲಿನ ರಸ್ತೆಗಳು ಇಲ್ಲ. ರಸ್ತೆ ದುರಸ್ತಿಗೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರೂ ಸರ್ಕಾರ ಕಮಕ್ ಕಿಮಕ್ ಎನ್ನುತ್ತಿಲ್ಲ ಎಂದರೆ ಇದರರ್ಥ ಏನು ಎಂದು ಪಾಟೀಲ್ ಆಕ್ರೋಶ ಭರಿತರಾದರು.
ಇದಕ್ಕೆ ಪ್ರಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸಿ ಎಂ ಉದಾಸಿ, ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸುತ್ತಿಲ್ಲ. ಅನುದಾನ ಬಿಡುಗಡೆಗೆ ಸ್ವಲ್ಪ ಮಟ್ಟಿದೆ ವಿಳಂಬವಾಗಿರಬಹುದು. ಮುಂದಿನ ದಿನಗಳಲ್ಲಿ ಆಯಾ ಕ್ಷೇತ್ರಗಳ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲಾಗುವುದು ಎಂದರು ಭರವಸೆ ನೀಡಿದರು. ಇದಕ್ಕೆ ತೃಪ್ತರಾಗದ ಖರ್ಗೆ ಹಾಗೂ ಎ ಎಸ್ ಪಾಟೀಲ್, ಟಿ ಬಿ ಜಯಚಂದ್ರ ಬಾವಿಗಿಳಿದು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಸದನದಿಂದ ಹೊರನಡೆದರು.
ಕೆಜಿಎಫ್ ಶಾಸಕ ಸಂಪಂಗಿ ಲಂಚ ಪುರಾಣ ಮತ್ತೊಮ್ಮೆ ಸದನದಲ್ಲಿ ಪ್ರತಿಧ್ವನಿಸಿತು. ದೇಶದಲ್ಲಿ ಪ್ರಥಮ ಪ್ರಕರಣ ಇದಾಗಿದ್ದು, ಸದನದ ಮರ್ಯಾದೆಯನ್ನು ಬಿಜೆಪಿ ಶಾಸಕರೊಬ್ಬರು ಹರಾಜಿಗಿಟ್ಟಿದ್ದಾರೆ. ಇದು ಎಲ್ಲರೂ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಸರ್ವ ಪಕ್ಷಗಳ ಸದನ ಸಮಿತಿ ರಚಿಸಿ ಸಂಪಂಗಿ ಪ್ರಕರಣ ಸದನ ಸಮಿತಿ ಕೈಗೆ ಒಪ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
(ದಟ್ಸ್ ಕನ್ನಡ ವಾರ್ತೆ)
ಸರ್ಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಲಿ, ಶೋಭಾ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications