ಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ

ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ ವರದಿಯನ್ನೂ ನ್ಯಾಯಾಧೀಶರಿಗೆ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಎಫ್ಬಿಐ ಭಾರತದ ಕೇಂದ್ರ ರಕ್ಷಣಾ ಏಜೆನ್ಸಿಯೊಡನೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪಾಕಿಸ್ತಾನದ ಉಗ್ರರೊಂದಿಗೆ ಕಸಬ್ ನಡೆಸಿದ ಮಾತುಕತೆಯ ವಿವರ, ವಿಚಾರಣೆಯ ವರದಿ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ಆರೋಪಪಟ್ಟಿ ಒಳಗೊಂಡಿದೆ.
ಸರ್ಕಾರಿ ನ್ಯಾಯವಾದಿ ಉಜ್ವಲ್ ನಿಕಮ್ ಮತ್ತು ಕ್ರೈಂ ಬ್ರಾಂಚ್ನ ಇತರ ಅಧಿಕಾರಿಗಳು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸುವಾಗ ಉಪಸ್ಥಿತರಿದ್ದರು. ಮೊಹಮ್ಮದ್ ಅಜ್ಮಲ್ ಕಸಬ್ನನ್ನು ಆರೋಪಪಟ್ಟಿ ಸಲ್ಲಿಸುವಾಗ ಹಾಜರುಪಡಿಸಲಾಗಿರಲಿಲ್ಲ.
ಆರೋಪಪಟ್ಟಿಯಲ್ಲಿ 9 ಲಷ್ಕರ್-ಇ-ತಯ್ಬಾದ ಉಗ್ರರು ಮತ್ತು 20 ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಹೆಸರಿಸಲಾಗಿದೆ. ಮುಂಬೈ ದಾಳಿಯ ಪ್ರಮುಖ ಆರೋಪಿಗಳಾಗಿರುವ ಝಾಕಿರ್-ಉರ್-ರೆಹಮಾನ್ ಲಕ್ವಿ, ಮತ್ತು ಯುಸೂಫ್ ಮುಜಮ್ಮಿಲ್ ಸೇರಿದಂತೆ 20 ಉಗ್ರರು ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವರೆಂದು ನಂಬಲಾಗಿದೆ. ಕೊಲೆ ಮತ್ತು ದೇಶದ ವಿರುದ್ಧ ಯುದ್ಧ ಸಾರಿದ ಆರೋಪ ಸೇರಿದಂತೆ ಭಾರತೀಯ ದಂಡ ಸಂಹಿತೆಯ ಪ್ರಕಾರ ಅನೇಕ ಆರೋಪಗಳನ್ನು ಕಸಬ್ ಎದುರಿಸುತ್ತಿದ್ದಾನೆ.
ಬಲ್ಲ ಮೂಲಗಳ ಪ್ರಕಾರ, ಆರೋಪಪಟ್ಟಿಯನ್ನು ಉರ್ದು ಸೇರಿದಂತೆ 7 ಭಾರತೀಯ ಭಾಷೆಗಳಲ್ಲಿ ಬರೆಯಲಾಗಿದೆ. ಉರ್ದು ಪ್ರತಿಯನ್ನು ಕಸಬ್ ಗೂ ನೀಡಲಾಗುತ್ತಿದೆ. ಆರೋಪಪಟ್ಟಿ ಸಲ್ಲಿಸಿದ ನಂತರ ಆರೋಪಿಗಳ ವಿರುದ್ಧ ವಿಚಾರಣೆ ಪ್ರಾರಂಭವಾಗಲಿದೆ. ಆದರೆ, ವಿಚಾರಣೆ ಮುಗಿಸಲು ಯಾವುದೇ ಗಡುವನ್ನು ನೀಡಲಾಗಿಲ್ಲ.
(ಏಜೆನ್ಸೀಸ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications